-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ರಖ್ಯಾತ ಗಾಯಕಿ ವಾಣಿ ಜಯರಾಂ ಸಾವಿನ ಸುತ್ತ ಅನುಮಾನದ ಹುತ್ತ: ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಚೆನ್ನೈ ಪೊಲೀಸರು

ಪ್ರಖ್ಯಾತ ಗಾಯಕಿ ವಾಣಿ ಜಯರಾಂ ಸಾವಿನ ಸುತ್ತ ಅನುಮಾನದ ಹುತ್ತ: ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಚೆನ್ನೈ ಪೊಲೀಸರು



ಚೆನ್ನೈ: ಪ್ರಖ್ಯಾತ ಗಾಯಕಿ ವಾಣಿ ಜಯರಾಂ ಚೆನ್ನೈನ ನುಂಗಂಬಾಕಮ್‌ನಲ್ಲಿನ ಹದೌಸ್ ರಸ್ತೆಯಲ್ಲಿರುವ ತಮ ನಿವಾಸದಲ್ಲಿ ಫೆ.4ರಂದು ಮೃತಪಟ್ಟಿದ್ದಾರೆ. ಇದೀಗ ಅವರ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

2018ರಲ್ಲಿ ವಾಣಿ ಜಯರಾಂ ಅವರ ಪತಿ ಜಯರಾಂ ಅವರು ಮೃತಪಟ್ಟಿದ್ದರು. ಬಳಿಕ ಅವರು ಒಬ್ಬರೇ ವಾಸಿಸುತ್ತಿದ್ದರು. ಅವರ ಮನೆಗೆಲಸದಾಕೆ ಮಲಾರ್‌ಕೋಡಿ ಎಂಬವರು ಎಂದಿನಂತೆ ನಿನ್ನೆ ಬೆಳಗ್ಗೆ 11 ಗಂಟೆಗೆ ಮನೆಗೆ ಬಂದಾಗ ಮನೆ ಲಾಕ್ ಆಗಿತ್ತು. ಎಷ್ಟು ಬಾರಿ ಬೆಲ್ ಒತ್ತಿದರೈ ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡು ಆಕೆ ತಕ್ಷಣ ವಾಣಿ ಜಯರಾಂ ಅವರ ಸಹೋದರಿ ಉಮಾ ಅವರಿಗೆ ಮಾಹಿತಿ ನೀಡಿದ್ದಾರೆ.

ಇದಾದ ಬಳಿಕ ಉಮಾ ಮತ್ತು ಮಲಾರ್‌ಕೋಡಿ ಇಬ್ಬರೂ ನಕಲಿ ಕೀ ಬಳಸಿ ಮನೆ ಪ್ರವೇಶಿಸಿದ್ದಾರೆ. ಈ ವೇಳೆ ವಾಣಿ ಜಯರಾಂ ಅವರು ಬೆಡ್‌ರೂಮ್‌ನಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾರೆ. ಅವರ ಹಣೆಯಲ್ಲಿ ಗಾಯಗಳಾಗಿದ್ದವು ಎಂದು ತಿಳಿದುಬಂದಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನೈ ಕಿಲ್ಪಕ್ ಆಸ್ಪತ್ರೆಗೆ ರವಾನಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ತಮಿಳುನಾಡು ಪೊಲೀಸರ ವಿಧಿವಿಜ್ಞಾನ ತಂಡ ವಾಣಿ ಜಯರಾಂ ಅವರ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದೆ. ಟ್ರಿಪ್ಲಿಕೇನ್‌ನ್ ಡಿಸಿಪಿ ಶೇಖರ್ ದೇಶಮುಖ್ ಮಾತನಾಡಿ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಹೆಚ್ಚಿನ ವಿವರಗಳನ್ನು ತಿಳಿಯಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದರು.

Ads on article

Advertise in articles 1

advertising articles 2

Advertise under the article