-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹೋಳಿಯಂದು ಯುವತಿ ಬಣ್ಣ ಹಚ್ಚಿದ ಕಾನೂನು ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆ ಮಾಡಿ ಹಲ್ಲೆ‌

ಹೋಳಿಯಂದು ಯುವತಿ ಬಣ್ಣ ಹಚ್ಚಿದ ಕಾನೂನು ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆ ಮಾಡಿ ಹಲ್ಲೆ‌


ಕೋಲಾರ: ಹೋಳಿಯ ಸಂದರ್ಭ ಯುವತಿಗೆ ಬಣ್ಣ ಹಾಕಿದ್ದಕ್ಕೆ ಕಾನೂನು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ, ಬೆತ್ತಲೆ ಮಾಡಿ ಹಲ್ಲೆಗೈದಿರುವ ಘಟನೆ ಕೋಲಾರ ತಾಲೂಕಿನ ಬೆಳಮಾರನಹಳ್ಳಿಯಲ್ಲಿ ನಡೆದಿದೆ. 

ಬೆಳಮಾರನಹಳ್ಳಿಯ ನಿವಾಸಿ ಮಧು ಬಿ.ಸಿ ಹಲ್ಲೆಗೊಳ್ಳಗಾದ ಕಾನೂನು ವಿದ್ಯಾರ್ಥಿ. ಆರೋಪಿ ಮಧು ಡಿ.ಎನ್.ಡಿ ಹಾಗೂ ಆತನ ಸ್ನೇಹಿತರಾದ ಶಿವರಾಜ್, ಅಭಿಲಾಷ್, ರಾಹುಲ್ ಮತ್ತು ಪ್ರಮೋದ್ ಮಧು ಬಿ.ಸಿ.ಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಈತ ತನ್ನದೇ ಊರಿನ ಯುವತಿಗೆ ಬಣ್ಣ ಹಚ್ಚಿದ್ದಕ್ಕೆ ಎಂದು ಹಲ್ಲೆ ಮಾಡಲಾಗಿದೆ. ಹೋಳಿ ಹಬ್ಬದ ದಿನದಂದು ಬಸ್‌ನಲ್ಲಿ ಯುವತಿಗೆ ಮಧು ಬಣ್ಣ ಹಚ್ಚಿದ್ದ. ಈ ವಿಚಾರ ತಿಳಿದು ಮಧು ಡಿ.ಎನ್.ಡಿ ಮತ್ತು ಆತನ ಸಂಗಡಿಗರು ಮಧುವನ್ನು ಕರೆಸಿ, ಶೆಡ್ ವೊಂದರಲ್ಲಿ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದ್ದಾರೆ.

ಈ ಘಟನೆ ಮಾ.17ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಾಯಾಳು ಮಧುಗೆ ಕೋಲಾರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Ads on article

Advertise in articles 1

advertising articles 2

Advertise under the article

ಸುರ