-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ನೆರೆಮನೆಯವರಿಗೆ ಕೋವಿ ತೋರಿಸಿ ಬೆದರಿಕೆ, ಪೊಲೀಸರಿಗೆ ಬಿಸಿನೀರು ಎರಚಿ ರಂಪಾಟ ಮಾಡಿದ ದಂಪತಿ

ಮಂಗಳೂರು: ನೆರೆಮನೆಯವರಿಗೆ ಕೋವಿ ತೋರಿಸಿ ಬೆದರಿಕೆ, ಪೊಲೀಸರಿಗೆ ಬಿಸಿನೀರು ಎರಚಿ ರಂಪಾಟ ಮಾಡಿದ ದಂಪತಿ

ಮಂಗಳೂರು: ನೆರೆಮನೆಯವರಿಗೆ ಕೋವಿ ತೋರಿಸಿ ಬೆದರಿಕೆಯೊಡ್ಡಿ, ಪೊಲೀಸರಿಗೆ ಬಿಸಿ ನೀರು ಎರಚಿ ದಂಪತಿ ರಂಪಾಟ ಮಾಡಿದ ಘಟನೆ ಮೂಡುಶೆಡ್ಡೆ ಗ್ರಾಪಂ ವ್ಯಾಪ್ತಿಯ ಎದುರು ಪದವಿನಲ್ಲಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪತಿಯನ್ನು ಕೋವಿ ಸಹಿತ ವಶಕ್ಕೆ ತೆಗೆದುಕೊಂಡಿದ್ದಾರೆ.

ಎದುರು ಪದವು ನಿವಾಸಿಗಳಾದ ರಾಜೇಶ್ ರೈ ಹಾಗೂ ರಾಜೇಶ್ವರಿ ದಂಪತಿ ನೆರೆಮನೆಯ ಯುವತಿಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು. ಆ ಬಳಿಕ ಸ್ಥಳದಲ್ಲಿ ಜಮಾಯಿಸಿದ್ದ ಸಾರ್ವಜನಿಕ ಕೋವಿ ತೋರಿಸಿ ಬೆದರಿಸಿ ಬೆದರಿಕೆಯೊಡ್ಡಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಕಾವೂರು ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೆ ದಂಪತಿ ಬಿಸಿನೀರು ಎರಚಿ ರಂಪಾಟ ಮಾಡಿದ್ದಾರೆ. ಆ ಬಳಿಕ ಪತಿಯನ್ನು ಸಾರ್ವಜನಿಕರೇ ಹಿಡಿದು  ಪೊಲೀಸರಿಗೊಪ್ಪಿಸಿದ್ದಾರೆ.


ಕಾವೂರು ಠಾಣಾ ಪೊಲೀಸರು ಕೋವಿ ಸಹಿತ ರಾಜೇಶ್ ರೈಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ