-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹೃದಯಾಘಾತದಿಂದ ಮೃತಪಟ್ಟ ಮಹಿಳೆಯ ಕೈಯಲ್ಲಿದ್ದ ಚಿನ್ನದ ಬಳೆ ನಾಪತ್ತೆ: ಹಾಗಾದರೆ ಆದದ್ದಾದರೂ ಏನು?

ಹೃದಯಾಘಾತದಿಂದ ಮೃತಪಟ್ಟ ಮಹಿಳೆಯ ಕೈಯಲ್ಲಿದ್ದ ಚಿನ್ನದ ಬಳೆ ನಾಪತ್ತೆ: ಹಾಗಾದರೆ ಆದದ್ದಾದರೂ ಏನು?


                              ಸಾಂದರ್ಭಿಕ ಚಿತ್ರ

ಥಾಣೆ: ಹೃದಯಾಘಾತಕ್ಕೊಳಗಾಗಿ ಮಹಿಳೆಯೊಬ್ಬ‌ರು ಮೃತಪಟ್ಟಿದ್ದರೂ ಆ್ಯಂಬುಲೆನ್ಸ್ ನಲ್ಲಿ ಆಕೆಯ ಮೈಮೇಲಿದ್ದ ಎರಡು ಚಿನ್ನದ ಬಳೆಗಳನ್ನು ಕಳವಾಗಿರುವ ಪ್ರಕರಣವೊಂದು ಮಹಾರಾಷ್ಟ್ರದ ಥಾಣೆಯ ಮೀರಾ ಭಯಂದರ್‌ನಲ್ಲಿ ನಡೆದಿದೆ. ಈ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆ್ಯಂಬುಲೆನ್ಸ್ ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಜೆಹುಬಿ ಶೇಖ್(85) ಎಂಬಾಕೆ ಹೃದಯಾಘಾತಕ್ಕೀಡಾಗಿ ಮೃತಪಟ್ಟವರು. ಇವರಿಗೆ ಹೃದಯಾಘಾತವಾದ ತಕ್ಷಣಪುತ್ರ ಆ್ಯಂಬುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ತಪಾಸಣೆ ನಡೆಸಿದ ವೈದ್ಯರು ಜೆಹುಬಿ ಶೇಖ್ ಅದಾಗಲೇ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರ ಮೃತದೇಹವನ್ನು ಮನೆಗೆ ತರಲಾಗಿತ್ತು. ಆದರೆ ಮನೆಯಲ್ಲಿ  ನೋಡಿದಾಗ ಅವದ ಕೈಯಲ್ಲಿದ್ದ ಎರಡು ಚಿನ್ನದ ಬಳೆಗಳು ನಾಪತ್ತೆಯಾಗಿತ್ತು.

ತಾಯಿಯ ಕೈಯಲ್ಲಿದ್ದ 28 ಸಾವಿರ ರೂ. ಮೌಲ್ಯದ 2 ಬಳೆಗಳು ಕಾಣೆಯಾಗಿವೆ ಎಂದು ಅವರ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಪೊಲೀಸರಿಗೆ ಆ್ಯಂಬುಲೆನ್ಸ್ ಸಿಬ್ಬಂದಿಯೇ ಕದ್ದಿರುವುದು ಎಂಬುದು ತಿಳಿದು ಬಂದಿದೆ. ಆತ ಬಳೆಯನ್ನು ವಿರಾರ್‌ನ ಒಂದು ಅಂಗಡಿಯಲ್ಲಿ ಮಾರಿದ್ದು ಪೊಲೀಸರು ಬಳೆಗಳನ್ನು ವಶಪಡಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ