-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಾಯಿಗೆ ಹಗ್ಗ ಕಟ್ಟಿರುವ ಸ್ಥಿತಿಯಲ್ಲಿ ಮೊಸಳೆ ಪತ್ತೆ: ಆಹಾರ ಸೇವಿಸಲಾಗದೆ ನದಿಯಿಂದ ಹೆದ್ದಾರಿಗೆ ಎಂಟ್ರಿ

ಬಾಯಿಗೆ ಹಗ್ಗ ಕಟ್ಟಿರುವ ಸ್ಥಿತಿಯಲ್ಲಿ ಮೊಸಳೆ ಪತ್ತೆ: ಆಹಾರ ಸೇವಿಸಲಾಗದೆ ನದಿಯಿಂದ ಹೆದ್ದಾರಿಗೆ ಎಂಟ್ರಿ


ವಿಜಯಪುರ: ಮೊಸಳೆಯೊಂದು ಬಾಯಿಗೆ ಹಗ್ಗ ಕಟ್ಟಿರುವ ಸ್ಥಿತಿಯಲ್ಲಿ ಕೊಲ್ಲಾರ ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಶನಿವಾರ ಪತ್ತೆಯಾಗಿದೆ.

ಕೃಷ್ಣಾನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಬಳಿ ಈ ಮೊಸಳೆ ಕಂಡು ಬಂದಿದೆ. ಮೊಸಳೆಯನ್ನು ನೋಡಿದ  ಸಾರ್ವಜನಿಕರು ಗಾಬರಿಗೊಂಡಿದ್ದಾರೆ. ಯಾವುದೋ ಜನವಸತಿಗೆ ನುಗ್ಗಿರುವ ಮೊಸಳೆಯ ಬಾಯಿಗೆ ಹಗ್ಗ ಕಟ್ಟಿ ಕೃಷ್ಣಾ ನದಿ ಬಳಿ ಬಿಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಬಾಯಿಗೆ ಹಗ್ಗ ಕಟ್ಟಿರುವ ಕಾರಣ ಆಹಾರ ಸೇವಿಸಲಾಗದೆ ನದಿಯಾಚೆ ಬಂದಿರುವ ಮೊಸಳೆಯನ್ನು ರಕ್ಷಿಸಲು ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ರಕ್ಷಣೆಗೆ ಕಾರ್ಯಾಚರಣೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ