-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಏ.23ರಂದು ಮಂಗಳೂರಿನಲ್ಲಿ ನೋವಿಗೋ ( NOVIGO) ಸೊಲ್ಯುಶನ್ಸ್ ಹೊಸ ಶಾಖೆ ಉದ್ಘಾಟನೆ

ಏ.23ರಂದು ಮಂಗಳೂರಿನಲ್ಲಿ ನೋವಿಗೋ ( NOVIGO) ಸೊಲ್ಯುಶನ್ಸ್ ಹೊಸ ಶಾಖೆ ಉದ್ಘಾಟನೆ




2012 ರಲ್ಲಿ ಮಂಗಳೂರು, ಬೆಂಗಳೂರು ನಗರದಲ್ಲಿ ಆರಂಭಗೊಂಡಿದ್ದ ನೋವಿಗೋ ಸೊಲ್ಯುಶನ್ಸ್ ಎನ್ನುವ ಹೆಸರಾಂತ ಐಟಿ ಕಂಪನಿಯಾಗಿದ್ದು ಈಗ ಮಂಗಳೂರು ನಗರದ ಫಳ್ನೀರ್‌ ನಲ್ಲಿ ಏ.23ರಂದು ಸಂಜೆ 5 ಗಂಟೆಗೆ ಹೊಸ ಶಾಖೆ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆ ಯ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಕುಮಾರ್ ಕಲ್ಬಾವಿ ತಿಳಿಸಿದರು.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಉದ್ಘಾಟನಾ ಸಮಾರಂಭದಲ್ಲಿ ಇನ್ಫೋಸಿಸ್ ಬಿಪಿಎಮ್ ಲಿ. ಸಿಇಒ & ಎಂ.ಡಿ. ಎಕ್ಸಿಕ್ಯೂಟಿವ್‌' ಉಪಾಧ್ಯಕ್ಷರಾದ ಅನಂತ ರಾಧಾಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜೊತೆಗೆ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಮಂಗಳೂರಿನಲ್ಲಿ ನೋವಿಗೋ ಸೊಲ್ಯುಶನ್ಸ್ ಕಂಪನಿ ಪ್ರಬಲವಾಗಿ ಬೆಳೆಯುತ್ತಿದ್ದು ಮೂರು ವರ್ಷಗಳಲ್ಲಿ ಅನಿಯಮಿತ ಸಾಧನೆ ದಾಖಲಿಸಿದೆ. ದುಬೈ, ಯುಎಇ, ಯುಕೆ, ಸಿಂಗಾಪುರದಲ್ಲಿ ಶಾಖೆ ಹೊಂದಿದ್ದು ಡಲ್ಲಾಸ್ ಟೆಕ್ಸಾಸ್‌ನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಮಂಗಳೂರು, ಬೆಂಗಳೂರು, ಚೆನ್ನೈ ಮತ್ತು ಕೊಚ್ಚಿಯಲ್ಲಿ ಶಾಖೆ ವಿಸ್ತರಿಸುತ್ತಿದ್ದು, ಮುಂದಿನ ವರ್ಷದಲ್ಲಿ ಕೆನಡಾ, ಕತಾರ್, ನೆದ‌ಲ್ಯಾಂಡ್ಸ್ ದೇಶದಲ್ಲಿ ಹೊಸ ಶಾಖೆಯು ಕಾರ್ಯಾಚರಿಸಲಿದೆ ಎಂದರು.

2025ರ ವೇಳೆಗೆ 1,500ಕ್ಕೂ ಹೆಚ್ಚು ಉದ್ಯೋಗ ದೊರಕಿಸುವ ಯೋಜನೆ ಹೊಂದಿದೆ. ಪ್ರಸ್ತುತ 700ಕ್ಕೂ ಅಧಿಕ ಐಟಿ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಇದೀಗ ಮಂಗಳೂರು ನಗರದ ಫರ್‌ ನಲ್ಲಿ ಕರುಣಾ ಪೈಡ್ ಸೆಂಟರಿನ ಐದನೇ ಮಹಡಿಯಲ್ಲಿ ಹೊಸ ಶಾಖೆ ಆರಂಭಿಸುತ್ತಿದೆ. ಮಂಗಳೂರಿನ ಪ್ರವೀಣ್‌ ಕುಮಾರ್‌ ಕಲ್ಪಾವಿ, ನೊವಿಗೋ ಸೊಲ್ಯುಶನ್ಸ್ ಕಂಪನಿಯ ಸಂಸ್ಥಾಪಕ ಮತ್ತು ಸಿಇಓ ಆಗಿದ್ದು, ಚೀಫ್ ಟೆಕ್ನಲಜಿ ಅಫೀಸರ್ ಮತ್ತು ಸಹ ಸಂಸ್ಥಾಪಕರಾಗಿರುವ ಮೊಹಮ್ಮದ್ ಹನೀಫ್, ಚೀಫ್ ಆಪರೇಟಿಂಗ್ ಆಫೀಸರ್ ಮತ್ತು ಸಹ ಸಂಸ್ಥಾಪಕರಾಗಿರುವ ಮೊಹಮ್ಮದ್ ಜರೋದ್, ಚೀಫ್ ಕಸ್ಟೋಮರ್‌ ಆಫೀಸರ್ ಮತ್ತು ಸಹ ಸಂಸ್ಥಾಪಕರಾದ ಶಿಹಾಬ್ ಕಲಂದರ್ ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ  ಮೊಹಮ್ಮದ್ ಹನೀಫ್ ,   ಮೊಹಮ್ಮದ್ ಜರೂರ್ ,ಶಿಹಾಬ್‌ ಕಲಂದರ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article

ಸುರ