-->
1000938341
ಭೀಕರ ಅಪಘಾತಕ್ಕೆ ದಂಪತಿ ಬಲಿ: ಮಕ್ಕಳಿಬ್ಬರ ಸ್ಥಿತಿ ಗಂಭೀರ

ಭೀಕರ ಅಪಘಾತಕ್ಕೆ ದಂಪತಿ ಬಲಿ: ಮಕ್ಕಳಿಬ್ಬರ ಸ್ಥಿತಿ ಗಂಭೀರ


ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತದಿಂದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ಮಕ್ಕಳಿಬ್ಬರ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಶ್ರೀನಿವಾಸ್ ಹಾಗೂ ಶ್ವೇತಾ ದಂಪತಿ ಮೃತಪಟ್ಟ ದುರ್ದೈವಿಗಳು.

ಶ್ರೀನಿವಾಸ್ ಹಾಗೂ ಶ್ವೇತಾ ದಂಪತಿ ಕಾರಿನಲ್ಲಿ ಮಕ್ಕಳೊಂದಿಗೆ ಕುಟುಂಬಸ್ಥರ ವಿವಾಹ ನಿಶ್ಚಿತಾರ್ಥಕ್ಕೆಂದು ಬೆಂಗಳೂರಿನಿಂದ ಭದ್ರಾವತಿಗೆ ತೆರಳುತ್ತಿದ್ದರು. ಈ ಸಂದರ್ಭ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತರೀಕೆರೆ ತಾಲೂಕಿನ ಬೆಟ್ಟದ ತಾವರೆ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. 

ಪರಿಣಾಮ ಈ ಭೀಕರ ಅಪಘಾತದಿಂದ ಕಾರಿನಲ್ಲಿದ್ದ ದಂಪತಿ ಶ್ರೀನಿವಾಸ್-ಶ್ವೇತಾ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಕ್ಕಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರೀಕೆರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Ads on article

Advertise in articles 1

advertising articles 2

Advertise under the article