ಮಂಗಳೂರು: ದ.ಕ.ಜಿಲ್ಲೆಯಲ್ಲಿ ಐವರು ಹಾಲಿ ಶಾಸಕರಿಗೆ ಮಣೆ - ಖಾದರ್ ಎದುರು ಸತೀಶ್ ಕುಂಪಲ


ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಪ್ರಬಲ ಪೈಪೋಟಿ ಎದುರಿಸುತ್ತಿರುವ ಬಿಜೆಪಿ ಮಂಗಳವಾರ ರಾತ್ರಿ ತನ್ನ ಚುನಾವಣಾ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ‌. ಪ್ರಥಮ ಪಟ್ಟಿಯಲ್ಲಿ ದ.ಕ.ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ ದ.ಕ.ಜಿಲ್ಲೆಯಲ್ಲಿ ಐವರು ಹಾಲಿ ಶಾಸಕರಿಗೆ ಬಿಜೆಪಿ ಮಣೆ ನೀಡಿದೆ.

ಹೌದು... ಮಂಗಳೂರು ಉತ್ತರಕ್ಕೆ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ವೇದವ್ಯಾಸ ಕಾಮತ್, ಮುಲ್ಕಿ - ಮೂಡುಬಿದಿರೆ ಕ್ಷೇತ್ರಕ್ಕೆ ಉಮಾನಾಥ ಕೋಟ್ಯಾನ್, ಬಂಟ್ವಾಳ ರಾಜೇಶ್ ನಾಯ್ಕ್, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ಅವರಿಗೆ ನೀಡಲಾಗಿದೆ. ಈಗಾಗಲೇ ಈ ಐವರೂ ಇದೇ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿದ್ದರು. ಮತ್ತೆ ಅವರಿಗೆ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ. 

ಆದರೆ ಮಂಗಳೂರು ಕ್ಷೇತ್ರದಲ್ಲಿ ಈ ಬಾರಿ ಹೊಸ ಮುಖ ಸತೀಶ್ ಕುಂಪಲ ಅವರಿಗೆ ಟಿಕೆಟ್ ದೊರಕಿದೆ. ಕಳೆದ ಬಾರಿ ಸಂತೋಷ್ ರೈ ಬೋಳಿಯಾರು ಅವರು ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಯು.ಟಿ.ಖಾದರ್ ಅವರ ಎದುರು ಕಣಕ್ಕಿಳಿದು ಸೋತಿದ್ದರು. ಈ ಬಾರಿ ಸಂತೋಷ್ ರೈ ಅವರ ಬದಲು ಬಿಜೆಪಿ ಸತೀಶ್ ಕುಂಪಲ ಅವರಿಗೆ ಮಣೆ ಹಾಕಿದೆ.

ಸತೀಶ್ ಕುಂಪಲ



ವೇದವ್ಯಾಸ ಕಾಮತ್




ಉಮನಾಥ ಕೋಟ್ಯಾನ್


ಭರತ್ ಶೆಟ್ಟಿ





ಹರೀಶ್ ಪೂಂಜಾ


ರಾಜೇಶ್ ನಾಯ್ಕ್


BREAKING NEWS
Loading latest news...
Join our WhatsApp Channel Powered By : Online Pudu