ದಕ್ಷಿಣ ಕನ್ನಡ ದಲ್ಲಿ ಈ ಮೂವರಿಗೆ BJP ಟಿಕೆಟ್ ಖಚಿತ!


ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ತಿಂಗಳಷ್ಟೆ ಬಾಕಿ ಇದೆ. ಆದರೆ ಬಿಜೆಪಿ ಯಿಂದ ಇನ್ನೂ ಅಭ್ಯರ್ಥಿಗಳ ಘೋಷಣೆಯಾಗಿಲ್ಲ. ಈ ಬಾರಿ ಬಿಜೆಪಿ ಹಲವು ಹಾಲಿ ಶಾಸಕರಿಗೆ ಟಿಕೆಟ್ ನೀಡದೆ ಇರಲು ನಿರ್ಧರಿಸಿದೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯ ಏಳು ಶಾಸಕರಿದ್ದಾರೆ. ಇದರಲ್ಲಿ ಇಬ್ಬರು ಶಾಸಕರು ಟಿಕೆಟ್ ಕಳೆದುಕೊಳ್ಳುವುದು ಖಚಿತ .ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಸಚಿವ, ಸುಳ್ಯ ಶಾಸಕ ಅಂಗಾರ ಟಿಕೆಟ್ ಕಳೆದುಕೊಳ್ಳುವುದು ಖಚಿತ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನುಳಿದ ಐದು ಶಾಸಕರಲ್ಲಿ ಮೂವರಿಗೆ ಟಿಕೆಟ್ ಖಚಿತವಾಗಿದೆ ಎಂದು ತಿಳಿದುಬಂದಿದೆ.  ಆ ಮೂವರು ಯಾರು ಎಂಬುದನ್ನು ನೋಡೋಣ

ವೇದವ್ಯಾಸ ಕಾಮತ್

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಈ ಬಾರಿ ಟಿಕೆಟ್ ಖಚಿತವಾಗಿದೆ ಎಂದು ತಿಳಿದುಬಂದಿದೆ. ವೇದವ್ಯಾಸ ಕಾಮತ್ ಅವರು ಎರಡನೇ ಬಾರಿ ಅದೃಷ್ಟ ಪರೀಕ್ಷೆಗೆ ಸಿದ್ದರಾಗಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಶಾಸಕ ಜೆ ಆರ್ ಲೋಬೋ ಅವರನ್ನು ಸೋಲಿಸಿ ವೇದವ್ಯಾಸ ಕಾಮತ್ ಗೆಲುವು ಸಾಧಿಸಿದ್ದರು.  ಈ ಬಾರಿಯು ವೇದವ್ಯಾಸ ಕಾಮತ್ ಗೆ ಟಿಕೆಟ್ ಖಚಿತ ಎಂದು ತಿಳಿದುಬಂದಿದೆ.

ಹರೀಶ್ ಪೂಂಜಾ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೂಡ ಬಿಜೆಪಿ ಟಿಕೆಟ್ ಖಚಿತ ಎಂದು ತಿಳಿದುಬಂದಿದೆ. ಹರೀಶ್ ಪೂಂಜಾ ಯುವ ಶಾಸಕರಾಗಿದ್ದು ಎರಡನೇ ಬಾರಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಹರೀಶ್ ಪೂಂಜಾ 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು. ಬಿಜೆಪಿ ಹೈಕಮಾಂಡ್ ಈ ಬಾರಿಯು ಹರೀಶ್ ಪೂಂಜಾ ಗೆ ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ರಾಜೇಶ್ ನಾಯ್ಕ್

ಬಂಟ್ವಾಳ ಕ್ಷೇತ್ರ ದ ಶಾಸಕ ರಾಜೇಶ್ ನಾಯ್ಕ್ ಅವರಿಗೂ ಈ ಬಾರಿ ಟಿಕೆಟ್ ಖಚಿತ ಎಂಬುದು ತಿಳಿದುಬಂದಿದೆ. ರಾಜೇಶ್ ನಾಯ್ಕ್ ಕೂಡ ಎರಡನೇ ಅವಧಿಗೆ ಶಾಸಕರಾಗಲು ಅದೃಷ್ಟ ಪರೀಕ್ಷೆ ಗಿಳಿದಿದ್ದಾರೆ. ಅವರು 2018 ರಲ್ಲಿ ಸಚಿವ ರಮನಾಥ ರೈ ಅವರನ್ನು ಸೋಲಿಸಿದ್ದರು. ಈ ಬಾರಿಯು ರಾಜೇಶ್ ನಾಯ್ಕ್ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.


BREAKING NEWS
Loading latest news...
Join our WhatsApp Channel Powered By : Online Pudu