-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಯುವತಿಯನ್ನು ಅಪಹರಿಸಿ 20ಲಕ್ಷಕ್ಕೆ ಬೇಡಿಕೆಯಿಟ್ಟ ದುಷ್ಕರ್ಮಿಗಳು

ಯುವತಿಯನ್ನು ಅಪಹರಿಸಿ 20ಲಕ್ಷಕ್ಕೆ ಬೇಡಿಕೆಯಿಟ್ಟ ದುಷ್ಕರ್ಮಿಗಳು


ಶಿವಮೊಗ್ಗ: ಯುವತಿಯೊಬ್ಬಳನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆಯಿಟ್ಟಿರುವ ಆತಂಕಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಈ ಬಗ್ಗೆ ದೂರು ದಾಖಲಾಗಿದೆ.

ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿ ರಂಜಿತಾ ಅಪಹರಣಕ್ಕೊಳಗಾದ ಯುವತಿ. ರಂಜಿತಾ ಶಿವಮೊಗ್ಗದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಳು. ಅಪಹರಣ ಮಾಡಿರುವ ದುಷ್ಕರ್ಮಿಗಳು ರಂಜಿತಾ ದೂರವಾಣಿಯಿಂದಲೇ ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ಕರೆ ಮಾಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.

ಯುವತಿಯನ್ನು ಮೇ 14ರಂದು ಸಂಜೆ 5ಗಂಟೆಯಿಂದ ರಾತ್ರಿ 9.30ಯೊಳಗೆ ಅಪಹರಿಸಲಾಗಿದೆ. ಬಳಿಕ ಆಕೆಯ ಮೊಬೈಲ್ ನಿಂದಲೇ ಕುಟುಂಬಸ್ಥರಿಗೆ 20 ಲಕ್ಷ ರೂ.ಗೆ ದುಷ್ಕರ್ಮಿಗಳು ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಮುಂದೆ ಆಗುವ ಅನಾಹುತವನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದಾರೆ.

ಈ ಸಂಬಂಧ ಯುವತಿಯ ಪಾಲಕರು ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಪಹರಣ ಪ್ರಕರಣ ದಾಖಲಿಸಿರುವ ಪೊಲೀಸರು ದುಷ್ಕರ್ಮಿಗಳ ಹಡೆಮುರಿ ಕಟ್ಟಲು ಬಲೆ ಬೀಸಿದ್ದಾರೆ. 

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article