-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
85ರ ವೃದ್ಧನ ಆರೈಕೆಗೆಂದು ವಾರದ ಹಿಂದೆ ಬಂದಿದ್ದವನು ಕೊಲೆಗೈದು ಪರಾರಿ

85ರ ವೃದ್ಧನ ಆರೈಕೆಗೆಂದು ವಾರದ ಹಿಂದೆ ಬಂದಿದ್ದವನು ಕೊಲೆಗೈದು ಪರಾರಿ


ಮುಂಬೈ: ಎಂಬತ್ತೈದರ ವೃದ್ಧರೊಬ್ಬರ ಆರೈಕೆಗೆಂದು ವಾರದ ಹಿಂದೆ ಬಂದಿದ್ದವನೇ ಅವರನ್ನು ಕೊಲೆಗೈದು ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇದೀಗ ಆರೋಪಿಗಾಗಿ ವ್ಯಾಪಕ ಶೋಧ ಆರಂಭವಾಗಿದೆ.

ಮುಂಬೈನ ಸಾಂತಾಕ್ರೂಜ್‌ನಲ್ಲಿನ 85 ವರ್ಷದ ಪುರುಷೋತ್ತಮ್ ನಾಯ್ಕ ಕೊಲೆಗೀಡಾದ ವ್ಯಕ್ತಿ. 
ಈ ವ್ಯಕ್ತಿ ತಮ್ಮ ಪತ್ನಿ ಹಾಗೂ 30 ವರ್ಷದ ಕೆಲಸದವನೊಂದಿಗೆ ತಮ್ಮ ಮನೆಯಲ್ಲಿದ್ದರು. ಆದರೆ ಪುರುಷೋತ್ತಮ್ ನಾಯ್ಕ ಅವರ ಕೈ-ಕಾಲುಗಳನ್ನು ಕಟ್ಟಿ ಹಾಕಿ ಉಸಿರುಗಟ್ಟಿಸಿ ಸಾಯಿಸಲಾಗಿದೆ. ಕೊಲೆ ಮಾಡಲು ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. 

ಇದೀಗ ಮನೆಗೆಲಸದ ವ್ಯಕ್ತಿ ಕೃಷ್ಣ ಮನ್‌ಬಹದ್ದೂರ್ ಪೆರಿಯಾರ್ ಎಂಬಾತ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ. ಆರೋಪಿ 8 ದಿನಗಳಿಂದ ನಾಯ್ಕ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎಂಬುದು ಪೊಲೀಸ್ ವಿಚಾರಣೆ ವೇಳೆ ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article

ಸುರ