-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಅಬ್ಬರದ ಪ್ರಚಾರದ ನಡುವೆಯೂ ಇನಾಯತ್ ಅಲಿ ಸೋಲಲು ಕಾರಣವೇನು?

ಮಂಗಳೂರು: ಅಬ್ಬರದ ಪ್ರಚಾರದ ನಡುವೆಯೂ ಇನಾಯತ್ ಅಲಿ ಸೋಲಲು ಕಾರಣವೇನು?


ಮಂಗಳೂರು: ದ.ಕ.ಜಿಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಕೈ - ಕಮಲ ಹಾಗೂ ಜೆಡಿಎಸ್ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕ್ಷೇತ್ರವಾಗಿತ್ತು. ಆದರೆ ಹೊಸ ಮುಖ ಇನಾಯತ್ ಅಲಿಯವರ ಅಬ್ಬರದ ಪ್ರಚಾರದ ನಡುವೆಯೂ ಕೈ ಪಕ್ಷ ಸೋಲನ್ನು ಅನುಭವಿಸಬೇಕಾಯಿತು. ಈ ಸೋಲಿಗೆ ಕಾರಣವೇನು ಎಂಬ ವಿಶ್ಲೇಷಣೆ ಇಲ್ಲಿದೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಬಿಜೆಪಿಯ ಪ್ರಬಲ ಕೋಟೆ ಇಲ್ಲಿ ಈ ಕ್ಷೇತ್ರ 1994ರಲ್ಲಿ ಬಿಜೆಪಿ ಪಾಲಾಯಿತು. ಆ ಬಳಿಕ ಎರಡು ಬಾರಿ ಕಾಂಗ್ರೆಸ್ ಇಲ್ಲಿ ಗೆಲುವು ಸಾಧಿಸಿದ ಹೊರತು ಇಲ್ಲಿ ಬಿಜೆಪಿಯೇ ತನ್ನ ಪ್ರಾಬಲ್ಯ ಸಾಧಿಸಿತ್ತು. ಹಾಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅಭಿವೃದ್ಧಿ ಹಾಗೂ ಹಿಂದುತ್ವ ಎರಡೂ ವಿಚಾರದಲ್ಲಿ ಕೆಲಸ ಮಾಡಿದ್ದಾರೆ‌. ಈ ಕಾರಣದಿಂದ ಭರತ್ ಶೆಟ್ಟಿಯವರು ಈ ಬಾರಿ ಅತ್ಯಧಿಕ ಮತ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ದರಿಂದ ಇನಾಯತ್ ಅಲಿಯವರು ಅಬ್ಬರದ ಪ್ರಚಾರ ಮಾಡಿದರೂ ಮತದಾರರು ಭರತ್ ಶೆಟ್ಟಿಯವರಿಗೆ ಮತ್ತೊಮ್ಮೆ ಅವಕಾಶ ನೀಡಿದ್ದಾರೆ.




Ads on article

Advertise in articles 1

advertising articles 2

Advertise under the article

ಸುರ