-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ರಜೆಯಲ್ಲಿರುವ ದ.ಕ.ಜಿಲ್ಲಾ ಎಸ್ಪಿ ವಿಕ್ರಮ್ ಅಮಟೆ, ಪ್ರಭಾರ ಎಸ್ಪಿಯಾಗಿ ಸಿ.ಬಿ.ರಿಷ್ಯಂತ್ ನೇಮಕ

ಮಂಗಳೂರು: ರಜೆಯಲ್ಲಿರುವ ದ.ಕ.ಜಿಲ್ಲಾ ಎಸ್ಪಿ ವಿಕ್ರಮ್ ಅಮಟೆ, ಪ್ರಭಾರ ಎಸ್ಪಿಯಾಗಿ ಸಿ.ಬಿ.ರಿಷ್ಯಂತ್ ನೇಮಕ


ಮಂಗಳೂರು: ದ.ಕ.ಜಿಲ್ಲಾ ಎಸ್ಪಿ ವಿಕ್ರಮ್ ಅಮಟೆಯವರು ಅನಾರೋಗ್ಯದ ಹಿನ್ನೆಲೆಯಲ್ಲಿ ರಜೆ ಪಡೆದಿದ್ದು, ಅವರ  ಸ್ಥಾನಕ್ಕೆ ಐಪಿಎಸ್‌ ಅಧಿಕಾರಿ ಸಿ.ಬಿ.ರಿಷ್ಯಂತ್ ಅವರಿಗೆ ಪ್ರಭಾರ ಎಸ್ಪಿಯಾಗಿ ಜವಾಬ್ದಾರಿ ವಹಿಸಲಾಗಿದೆ.

ದಾವಣಗೆರೆಯ ಜಿಲ್ಲೆ ಎಸ್ಪಿಯಾಗಿದ್ದ ಸಿ.ಬಿ.ರಿಷ್ಯಂತ್ ರನ್ನು ಚುನಾವಣೆ ನಿಮಿತ್ತ ಬೆಂಗಳೂರಿನ ಡಿಜಿ ಕಚೇರಿಯಲ್ಲಿ ನೇಮಕ ಮಾಡಲಾಗಿತ್ತು. ಇದೀಗ ದ.ಕ.ಎಸ್ಪಿಯವರು ರಜೆಯಲ್ಲಿರುವುದರಿಂದ, ರಿಷ್ಯಂತ್ ಅವರಿಗೆ ಪ್ರಭಾರ ಹೊಣೆ ವಹಿಸಲಾಗಿದೆ.

ಸಿ.ಬಿ.ರಿಷ್ಯಂತ್ 2013ರ ಬ್ಯಾಚ್ ನ ಕರ್ನಾಟಕ ಕೇಡರ್ ಐ ಪಿಎಸ್ ಅಧಿಕಾರಿಯಾಗಿದ್ದಾರೆ. ಮೂಲತಃ ಬೆಂಗಳೂರು ನಿವಾಸಿಯಾಗಿರುವ ಇವರು ಪುತ್ತೂರಿನಲ್ಲಿ ಈ ಹಿಂದೆ ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಾಗಲಕೋಟೆ, ದಾವಣಗೆರೆ, ಮೈಸೂರಿನಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ಅವರನ್ನು ದ.ಕ. ಜಿಲ್ಲಾ ಪ್ರಭಾರ ಎಸ್ಪಿಯಾಗಿ ಸರಕಾರ ಆದೇಶ ಹೊರಡಿಸಿದೆ.

Ads on article

Advertise in articles 1

advertising articles 2

Advertise under the article

ಸುರ