-->
1000938341
ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ- ಇನ್ನು ರಾಜ್ಯದಲ್ಲಿ 200 ಯುನಿಟ್ ವರೆಗೆ ವಿದ್ಯುತ್ ಉಚಿತ

ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ- ಇನ್ನು ರಾಜ್ಯದಲ್ಲಿ 200 ಯುನಿಟ್ ವರೆಗೆ ವಿದ್ಯುತ್ ಉಚಿತ

 


 

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಈ ಐದು ಗ್ಯಾರಂಟಿಗಳಿಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ಮುದ್ರೆಯನ್ನೊತ್ತಲಾಗಿದೆ.

 

ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿದ ಐದು ಗ್ಯಾರಂಟಿಗಳು ಜನಪ್ರಿಯವಾಗಿದ್ದವು.  ಅದರಲ್ಲಿ ಜನರನ್ನು ಹೆಚ್ಚು ಸೆಳೆದದ್ದು ಗೃಹಜ್ಯೋತಿ  ಗ್ಯಾರಂಟಿ.  ಕಾಂಗ್ರೆಸ್ ಸರಕಾರ ಬಂದರೆ ಪ್ರತಿ ಮನೆಗೆ 200 ಯುನಿಟ್ ಉಚಿತ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು.

 

ಈ ಗ್ಯಾರಂಟಿಯಿಂದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೇರಲು ದೊಡ್ಡ ಕೊಡುಗೆ ನೀಡಿತ್ತು. ಎಪಿಎಲ್ ಬಿಪಿಎಲ್ ಎಂಬ ವಿಂಗಡನೆಯಿಲ್ಲದೆ 200 ಯುನಿಟ್ ವಿದ್ಯುತ್ ಉಚಿತ ನೀಡಲಾಗುವುದೆಂದು ನೀಡಿದ ಭರವಸೆ ಜನರನ್ನು ಆಕರ್ಷಿಸಿತ್ತು.

 

ಇದೀಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಅವಧಿಯಲ್ಲಿ ಸಿದ್ದರಾಮಯ್ಯ ಸರಕಾರ ನೀಡಿದ ಭರವಸೆಗಳನ್ನು ಈಡೇರಿಸಿದ ಖ್ಯಾತಿಗೆ ಪಾತ್ರವಾಗಿತ್ತು. ಇದೀಗ ಮತ್ತೆ ಸಿದ್ದರಾಮಯ್ಯು ಮುಖ್ಯಮಂತ್ರಿಯಾಗಿ ಚುನಾವಣೆ ಸಂದರ್ಭದಲ್ಲಿ ನೀಡಿದ ಐದು ಭರವಸೆಗಳನ್ನು ಈಡೇರಿಸಿದೆ.




 

ಗೃಹ ಜ್ಯೋತಿ ಯೋಜನೆ ಬಗ್ಗೆ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯದ ಪ್ರತಿ ಮನೆಗೆ ಗರಿಷ್ಠ 200 ಯುನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದೇವೆ.

ಯೋಜನೆಯ ದುರ್ಬಳಕೆ ತಡೆಯಲು ಫಲಾನುಭವಿಗಳು ಹಿಂದಿನ ಒಂದು ವರ್ಷದ ಅವಧಿಯಲ್ಲಿ ಬಳಕೆ ಮಾಡಿರುವ ವಿದ್ಯುತ್ ಸರಾಸರಿಯನ್ನು ಗಣನೆಗೆ ತೆಗೆದುಕೊಂಡು, ಅದರ ಜೊತೆಗೆ 10% ವಿದ್ಯುತನ್ನು ಹೆಚ್ಚುವರಿಯಾಗಿ ಉಚಿತವಾಗಿ ನೀಡಲಾಗುವುದು.
ಜುಲೈ 1 ವರೆಗೆ ಬಳಕೆ ಮಾಡಿರುವ ವಿದ್ಯುತ್ ಬಿಲ್ ಅನ್ನು ಬಳಕೆದಾರರು ಕಟ್ಟಬೇಕಿದ್ದು, ಆಗಸ್ಟ್ ತಿಂಗಳಿನಿಂದ ಯೋಜನೆಯ ಲಾಭ ಪಡೆಯಬಹುದಾಗಿದೆ.

ನಾವು ನುಡಿದಂತೆ ನಡೆಯುವವರು,
ಜನತೆಗೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಪ್ರತಿ ಮನೆಗೆ ನಾವು ಉಚಿತ ವಿದ್ಯುತ್ ನೀಡುತ್ತೇವೆ. ಎಂದು ತಿಳಿಸಿದ್ದಾರೆ.

ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನತೆಗೆ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳಿಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಮೂಲಕ "ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ" ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ.

ಬೆಲೆಯೇರಿಕೆ, ನಿರುದ್ಯೋಗ, ಹಸಿವು, ಬಡತನಗಳಿಂದ ನೊಂದು ಬದುಕು ಸಾಗಿಸಲು ಹೆಣಗಾಡುತ್ತಿರುವ ಜನರ ಬದುಕಿಗೆ ನಮ್ಮ ಗ್ಯಾರೆಂಟಿ ಯೋಜನೆಗಳು ಹೊಸ ಚೈತನ್ಯ ತುಂಬಲಿದೆ ಎಂದು ಭಾವಿಸಿದ್ದೇನೆ.

ಜನರ ಬೆವರ ಗಳಿಕೆಯ ಹಣ ಜನಕಲ್ಯಾಣ ಕಾರ್ಯಗಳಿಗೆ ಮಾತ್ರ ಬಳಕೆಯಾಗಲಿ, ಹಸಿವು, ಬಡತನ, ನಿರುದ್ಯೋಗಗಳ ತಾಪ ನಾಡಿನ ಜನರಿಗೆ ತಟ್ಟದಿರಲಿ ಎಂಬುದು ನಮ್ಮ ಸದುದ್ದೇಶ.

ನಮ್ಮ 5 ಗ್ಯಾರೆಂಟಿಗಳನ್ನು ನಾಡಿನ ಜನತೆಗೆ ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.


ಇದನ್ನು ಓದಿ ರಾಜ್ಯದಲ್ಲಿ ಇನ್ನು ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

 

 

 

Ads on article

Advertise in articles 1

advertising articles 2

Advertise under the article