-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೆಎಸ್‌ಆರ್ ಟಿಸಿ ಬಸ್ ಡಿಕ್ಕಿ: ಶಾಪಿಂಗ್ ಗೆ ಹೋದ ಮಹಿಳೆ ಪತಿ - ಪುತ್ರಿ ಎದುರೇ ಸಾವು

ಕೆಎಸ್‌ಆರ್ ಟಿಸಿ ಬಸ್ ಡಿಕ್ಕಿ: ಶಾಪಿಂಗ್ ಗೆ ಹೋದ ಮಹಿಳೆ ಪತಿ - ಪುತ್ರಿ ಎದುರೇ ಸಾವು


ಬೆಂಗಳೂರು: ಪತಿ - ಪುತ್ರಿಯೊಂದಿಗೆ ಸ್ಕೂಟಿಯಲ್ಲಿ ಶಾಪಿಂಗ್‌ಗೆ ಹೊರಟ ಮಹಿಳೆಯೊಬ್ಬರು ಕೆಎಸ್‌ಆರ್ ಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಬಳಿ ನಡೆದಿದೆ.

ಹೆಬ್ಬಾಳ ಬಳಿಯ ಕೆಂಪಾಪುರ ನಿವಾಸಿ ಲತಾ ಎಂಬಾಕೆ ಮೃತಪಟ್ಟವರು. ಎರಡು ದ್ವಿಚಕ್ರ ವಾಹನಗಳಲ್ಲಿ ಕುಟುಂಬಸ್ಥರು ಶಾಪಿಂಗ್ ಗೆ ಬಂದಿದ್ದಾರೆ. ಒಂದು ಸ್ಕೂಟಿಯಲ್ಲಿ ಪತಿಯೊಂದಿಗೆ ಲತಾ ಪ್ರಯಾಣಿಸುತ್ತಿದ್ದರು. ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆಯಿಂದ ಇಳಿಯುವ ವೇಳೆ ವೇಗವಾಗಿ ಬಲಕ್ಕೆ ಬಂದಿರುವ ಬಸ್‌ ಹಿಂಭಾಗದಿಂದ ಇವರಿದ್ದ ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಆಗ ಲತಾ ಅವರ ಮೇಲೆಯೇ ಬಸ್ ಹರಿದಿದೆ ಪರಿಣಾಮ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನೊಂದು ದ್ವಿಚಕ್ರ ವಾಹನದಲ್ಲಿ ಪುತ್ರಿ ಪ್ರಯಾಣಿಸುತ್ತಿದ್ದಳು. ಪತಿ ಹಾಗೂ ಪುತ್ರಿಯ ಎದುರೇ ಲತಾ ಸಾವಿಗೀಡಾದ್ದಾರೆ.

ಚಿಕ್ಕಬಳ್ಳಾಪುರದ ಚಿಂತಾಮಣಿ ಡಿಪೋಗೆ ಸೇರಿದ ಈ ಬಸ್, ಬೆಂಗಳೂರಿನ ಚಿಂತಾಮಣಿ ಕಡೆಗೆ ಸಾಗುತ್ತಿತ್ತು. ಪ್ರಕರಣ ಸಂಬಂಧ ಚಾಲಕ-ನಿರ್ವಾಹಕ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ