-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ರಾಜ್ಯದ ಗಮನ ಸೆಳೆದ ಆಳ್ವಾಸ್‌ ಯೋಗ: 2 ಸಾವಿರ ವಿದ್ಯಾರ್ಥಿಗಳಿಂದ ದೈಹಿಕ ಕಸರತ್ತು

ರಾಜ್ಯದ ಗಮನ ಸೆಳೆದ ಆಳ್ವಾಸ್‌ ಯೋಗ: 2 ಸಾವಿರ ವಿದ್ಯಾರ್ಥಿಗಳಿಂದ ದೈಹಿಕ ಕಸರತ್ತು

ರಾಜ್ಯದ ಗಮನ ಸೆಳೆದ ಆಳ್ವಾಸ್‌ ಯೋಗ: 2 ಸಾವಿರ ವಿದ್ಯಾರ್ಥಿಗಳಿಂದ ದೈಹಿಕ ಕಸರತ್ತು





ವಿಶ್ವ ಯೋಗ ದಿನದ ಅಂಗವಾಗಿ ಮೂಡಬಿದರಿಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಬೃಹತ್ ಯೋಗ ಕಾರ್ಯಕ್ರಮ ನಡೆಯಿತು.



ಮುಂಡ್ರದೆಗುತ್ತು ಕೆ. ಅಮರನಾಥ ಶೆಟ್ಟಿ ಹಾಗೂ ಮೋಹಿನಿ ಅಪ್ಪಾಜಿ ನಾಯಕ ಸಭಾಂಗಣದಲ್ಲಿ ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಬೃಹತ್ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.



ಮೂಡಬಿದಿರೆಯ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಯೋಗ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್ ಮುಖ್ಯ ಅತಿಥಿಗಳಾಗಿದ್ದರು.


ವಿದ್ಯಾರ್ಥಿಗಳು ಒಂದು ಗಂಟೆಗೂ ಹೆಚ್ಚು ಕಾಲ ಪ್ರಾಣಾಯಾಮ, ಆಸನ, ಧ್ಯಾನ, ವಿಶ್ರಾಂತಿ ಯೋಗಗಳನ್ನು ಮಾಡಿದರು. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯ ಪ್ರಕಾರ ಯೋಗಾಭ್ಯಾಸಗಳು ನಡೆಯಿತು.

ಈ ಹಿಂದೆ ಯೋಗಥಾನ್ ಮತ್ತು ಜಾಂಬೂರಿ ಸಂದರ್ಭದಲ್ಲೂ ಆಳ್ವಾಸ್ ವಿದ್ಯಾರ್ಥಿಗಳು ಬೃಹತ್ ಯೋಗ ಪ್ರದರ್ಶನ ನಡೆಸಿ ಎಲ್ಲರ ಗಮನ ಸೆಳೆದಿದ್ದರು.




Ads on article

Advertise in articles 1

advertising articles 2

Advertise under the article

ಸುರ