-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಟಿಕೆಟ್ ವಿಳಂಬ, ಹೊಸಬರಿಗೆ ಮಣೆ- ಬಿಜೆಪಿ ಸೋಲಿಗೆ ಕಾರಣ: ಬೊಮ್ಮಾಯಿ ಆತ್ಮಾವಲೋಕನ

ಟಿಕೆಟ್ ವಿಳಂಬ, ಹೊಸಬರಿಗೆ ಮಣೆ- ಬಿಜೆಪಿ ಸೋಲಿಗೆ ಕಾರಣ: ಬೊಮ್ಮಾಯಿ ಆತ್ಮಾವಲೋಕನ

ಟಿಕೆಟ್ ವಿಳಂಬ, ಹೊಸಬರಿಗೆ ಮಣೆ- ಬಿಜೆಪಿ ಸೋಲಿಗೆ ಕಾರಣ: ಬೊಮ್ಮಾಯಿ ಆತ್ಮಾವಲೋಕನ





ಟಿಕೆಟ್ ಘೋಷಣೆಯಲ್ಲಿ ವಿಳಂಬ ಮತ್ತು ಹೊಸಬರಿಗೆ ಟಿಕೆಟ್ ಬಿಜೆಪಿ ಸೋಲಿಗೆ ಪ್ರಮುಖ ಕಾರಣ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಆತ್ಮಾವಲೋಕನ ಮಾಡಿಕೊಂಡಿದ್ಧಾರೆ.


ಬಿಜೆಪಿ ಶಾಸಕರು, ಸೋತಿರುವ ಅಭ್ಯರ್ಥಿಗಳು ಮತ್ತು ಬಿಜೆಪಿ ನಾಯಕರ ಜೊತೆಗೆ ಸೋಲಿನ ಪರಾಮರ್ಶೆ ನಡೆಸಿದ ಬಳಿಕ ಅವರು ಮಾಧ್ಯಮಕ್ಕೆ ಈ ಪ್ರತಿಕ್ರಿಯೆ ನೀಡಿದ್ದಾರೆ.



ಕೆಲವು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಸ್ಥಳೀಯ ಅಂಶಗಳು ಕಾರಣವಾಗಿವೆ. ಆದರೆ, ಇಡೀ ರಾಜ್ಯದಲ್ಲಿ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಸೋಲಿನ ಸಂಪೂರ್ಣ ಹೊಣೆಯನ್ನು ನಾನೇ ತೆಗೆದುಕೊಳ್ಳುತ್ತೇನೆ ಎಂದು ಬೊಮ್ಮಾಯಿ ಅವರು ಹೇಳಿದರು.



ಜನತೆ ನಮ್ಮನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ನಾವು ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ಅವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.



ಇದೇ ವೇಳೆ, ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭವಾಗಿದೆ ಎಂದು ಹೇಳಿದ ಅವರು, ಮುಂದಿನ ದಿನಗಳಲ್ಲಿ ಜನ ನಮಗೆ ಮನ್ನಣೆ ನೀಡಲಿದ್ದಾರೆ ಎಂದು ಆಶಾವಾದ ವ್ಯಕ್ತಪಡಿಸಿದರು.



Ads on article

Advertise in articles 1

advertising articles 2

Advertise under the article

ಸುರ