-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅಂತರ್ಧಮೀಯ ವಿವಾಹ: ತಾಳಿಕಟ್ಟುವ ಮುನ್ನವೇ ವಧುವನ್ನು ಎಳೆದೊಯ್ದ ಪೊಲೀಸರು

ಅಂತರ್ಧಮೀಯ ವಿವಾಹ: ತಾಳಿಕಟ್ಟುವ ಮುನ್ನವೇ ವಧುವನ್ನು ಎಳೆದೊಯ್ದ ಪೊಲೀಸರು


ತಿರುವನಂತಪುರಂ: ಅಂತರ್ಧರ್ಮೀಯ ಜೋಡಿಯೊಂದು ಕೇರಳದ ತಿರುವನಂತಪುರದ ಕೋವಳಂ ದೇವಾಲಯದಲ್ಲಿ ವಿವಾಹವಾಗುವುದರಲ್ಲಿತ್ತು. ಆದರೆ ವಿವಾಹಕ್ಕೇ ಮುನ್ನವೇ ಪೊಲೀಸರು ಸ್ಥಳಕ್ಕೆ ದೌಢಾಯಿಸಿ ವಧುವನ್ನು ಎಳೆದೊಯ್ದ ಘಟನೆ ನಡೆದಿದೆ.

ಈ ಘಟನೆ ಜೂನ್ 18ರಂದು ನಡೆದಿದೆ‌. ಪರಸ್ಪರ ಪ್ರೀತಿಸುತ್ತಿದ್ದ ಆಲ್ಫಿಯಾ ಹಾಗೂ ಅಖಿಲ್ ಜೋಡಿ ಮದುವೆಯಾಗಲು ಕೋವಳಂ ದೇವಾಲಯಕ್ಕೆ ತೆರಳಿತ್ತು. ವರ ಇನ್ನೇನು ವಧುವಿಗೆ ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆಲ್ಫಿಯಾಳನ್ನು ವಶಕ್ಕೆ ಪಡೆದು ನ್ಯಾಯಾಲದಲ್ಲಿ ಹಾಜರುಪಡಿಸಿದ್ದಾರೆ.


ಘಟನೆಯ ಕುರಿತು ಸ್ಪಷ್ಟನೆ ನೀಡಿರುವ ಪೊಲೀಸ್ ಅಧಿಕಾರಿಗಳು ಆಲ್ಫಿಯಾ ನಾಪತ್ತೆಯಾಗಿರುವ ಬಗ್ಗೆ ನಮಗೆ ಆಕೆಯ ಪೋಷಕರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಾವು ಆಕೆಯನ್ನು ಕರೆದೊಯ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದೇವೆ ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವರ ಅಖಿಲ್ ಹಾಗೂ ವಧು ಆಲ್ಫಿಯಾರನ್ನು ಮದುವೆ ಮಂಟಪದಿಂದಲೇ ಪೊಲೀಸರು ಬಲವಂತವಾಗಿ ಎಳೆದೊಯ್ಯುತ್ತಿರುವ ವಿಡಿಯೋ ಚಿತ್ರೀಕರಿಸಲಾಗಿದೆ. ಪೊಲೀಸರ ಈ ವರ್ತನೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗುತ್ತದೆ ಎಂದು ಜೋಡಿ ತಿಳಿಸಿದೆ.

Ads on article

Advertise in articles 1

advertising articles 2

Advertise under the article