-->
1000938341
ಮಂಗಳೂರು: ಬಾತ್ ರೂಂ ತೊಳೆಯುತ್ತಿದ್ದ ಮಹಿಳೆಯ ಹಿಂದಿನಿಂದ ಬಿಗಿದಪ್ಪಿ ಅತ್ಯಾಚಾರಗೈದು ಹತ್ಯೆ - ಆರೋಪಿಗೆ ಕೋರ್ಟ್ ನೀಡಿದ ಶಿಕ್ಷೆಯೇನು ಗೊತ್ತಾ?

ಮಂಗಳೂರು: ಬಾತ್ ರೂಂ ತೊಳೆಯುತ್ತಿದ್ದ ಮಹಿಳೆಯ ಹಿಂದಿನಿಂದ ಬಿಗಿದಪ್ಪಿ ಅತ್ಯಾಚಾರಗೈದು ಹತ್ಯೆ - ಆರೋಪಿಗೆ ಕೋರ್ಟ್ ನೀಡಿದ ಶಿಕ್ಷೆಯೇನು ಗೊತ್ತಾ?

ಮಂಗಳೂರು: ಮನೆಗೆ ನುಗ್ಗಿ ಬಾತ್ ರೂಂ ತೊಳೆಯುತ್ತಿದ್ದ ಒಂಟಿ ಮಹಿಳೆಯನ್ನು ಹಿಂಭಾಗದಿಂದ ಬಿಗಿದಪ್ಪಿ ಅತ್ಯಾಚಾರಗೈದು, ಹತ್ಯೆ ನಡೆಸಿರುವ ಕಾಮುಕನೋರ್ವನ ಮೇಲಿನ ಆರೋಪ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಮಂಜೇಶ್ವರ ನಿವಾಸಿ ಮಹಮ್ಮದ್‌ ಅಶ್ರಫ್‌ (33) ಶಿಕ್ಷೆಗೊಳಗಾದ ಆರೋಪಿ.

ಮಹಮ್ಮದ್‌ ಅಶ್ರಫ್‌ ಕೂಲಿ ಕಾರ್ಮಿಕ. ಈತನಿಗೆ ವಿವಾಹವಾಗಿ ಇಬ್ಬರು ಮಕ್ಕಳೂ ಇದ್ದಾರೆ. ಈತ ಬಾಳೆಪುಣಿ ಗ್ರಾಮದ ಬೆಳ್ಕೆರಿಯಲ್ಲಿರುವ ಮನೆಯೊಂದರ ತೋಟದ ಕೆಲಸಕ್ಕೆ ಹೋಗಿದ್ದ ಸಂದರ್ಭ ಅಲ್ಲಿ ಮಹಿಳೆ ಮನೆಯಲ್ಲಿ ಒಂಟಿಯಾಗಿರುವುದನ್ನು ಗಮನಿಸಿದ್ದಾನೆ. ಒಂದು ದಿನ ಬಾವಿಗೆ ಹೆಬ್ಬಾವು ಬಿದ್ದಿರುವುದನ್ನು ತೆಗೆಯಲು ಹೋಗಿ ಆಕೆಯನ್ನು ಪರಿಚಯ ಮಾಡಿಕೊಂಡೂ ಬಂದಿದ್ದನು. ಆ ಬಳಿಕ ಮಹಿಳೆಯನ್ನು ಅತ್ಯಾಚಾರಗೈಯುವ ಉದ್ದೇಶದಿಂದಲೇ 2020ರ ಸೆ.24ರಂದು ಬೆಳಗ್ಗೆ 10ಗಂಟೆಗೆ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಚಿಲಕ ಹಾಕಿದ್ದಾನೆ. ಈ ವೇಳೆ ಮಹಿಳೆ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಿದ್ದರು. ಈ ವೇಳೆ ಆಕೆಯನ್ನು ಹಿಂದಿನಿಂದ ಬಿಗಿದಪ್ಪಿ ನೆಲಕ್ಕೆ ಬೀಳಿಸಿದ್ದಾನೆ. ತಕ್ಷಣ ಪ್ರಜ್ಞಾಹೀನವಾಗಿ ಬಿದ್ದ ಆಕೆಯನ್ನು ಅತ್ಯಾಚಾರವೆಸಗಿದ್ದಾನೆ. ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ.

ಬಳಿಕ ಆಕೆಯ ಕಿವಿಯೋಲೆ, ಮನೆಯಲ್ಲಿದ್ದ 18,000 ರೂ. ದೋಚಿ, ಮಹಿಳೆಯ ಮೈಮೇಲೆ ಬಟ್ಟೆಗಳನ್ನು ಹಾಕಿ ಬೆಂಕಿ ಕೊಟ್ಟು ಸಾಕ್ಷ್ಯ ನಾಶ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಕೊಣಾಜೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು 2021ರ ಜು.13ರಂದು ಬಂಧಿಸಿದ್ದರು. ಮಂಗಳೂರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್‌ ಆಯುಕ್ತ ರಂಜಿತ್‌ ಕುಮಾರ್‌ ಬಂಡಾರು ವಿಶೇಷ ತನಿಖಾಧಿಕಾರಿಯಾಗಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್‌.ವಿ. ವಿಚಾರಣೆ ನಡೆಸಿ ನ್ಯಾಯಾಧೀಶರು ಅಪರಾಧಿಗೆ ಐಪಿಸಿ ಕಲಂ 302ರಡಿ ಕಠಿಣ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ವರ್ಷ ಸಜೆ, ಕಲಂ 448ರಡಿ 1 ವರ್ಷ ಕಠಿಣ ಸಜೆ, 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಜೆ, ಕಲಂ 376ರಡಿ 10 ವರ್ಷ ಕಠಿನ ಸಜೆ, 1 ಲಕ್ಷ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ವರ್ಷ ಕಠಿಣ ಸಜೆ, ಕಲಂ 392ರಡಿ 10 ವರ್ಷ ಕಠಿಣ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 6 ತಿಂಗಳು ಹೆಚ್ಚುವರಿ ಕಠಿಣ ಸಜೆ, ಕಲಂ 201ರಡಿ 7 ವರ್ಷ ಕಠಿಣ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ದಂಡ ವಿಧಿಸಿದ್ದಾರೆ.

ಸರಕಾರದ ಪರ ಅಭಿಯೋಜಕಿ ಜ್ಯೋತಿ ಪ್ರಮೋದ್‌ ನಾಯಕ್‌ ಮತ್ತು ಬಿ. ಶೇಖರ್‌ ಶೆಟ್ಟಿ ವಾದಿಸಿದ್ದರು.

Ads on article

Advertise in articles 1

advertising articles 2

Advertise under the article