-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಿರುತೆರೆ, ಸಿನಿಮಾ ನಟಿ ಮೇಲೆ ಮಾರಣಾಂತಿಕ ಹಲ್ಲೆ

ಕಿರುತೆರೆ, ಸಿನಿಮಾ ನಟಿ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ: ಕಿರುತೆರೆ ಹಾಗೂ ಸಿನಿಮಾ ನಟಿಯೋರ್ವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಸಾಗರ ತಾಲೂಕಿನ ಉಳ್ಳೂರು ಗ್ರಾಪಂ ವ್ಯಾಪ್ತಿಯ ಕಾಸ್ಟಾಡಿಯಲ್ಲಿ ನೆಡೆದಿದೆ.

ಗಾಯಾಳು ನಟಿಯನ್ನು ಅನು ಗೌಡ ಎಂದು ಗುರುತಿಸಲಾಗಿದೆ. ಜಮೀನು ವಿವಾದದಿಂದ ಅನುಗೌಡ ಮೇಲೆ ಹಲ್ಲೆ ನಡೆಸಲಾಗಿದ್ದು, ಸದ್ಯ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತಿದ್ದಾರೆ ಎನ್ನಲಾಗಿದೆ.

ನಟಿಯಾಗಿದ್ದ ಆಗಿದ್ದ ಅನು ಗೌಡ ಹಲವು ಸಿನಿಮಾ ಮತ್ತು ಕಿರುತೆರೆಯಲ್ಲಿ ನಟಿಸಿದ್ದರು. ಕಾಸ್ಟಡಿಯಲ್ಲಿ ಜಮೀನು ನೋಡಿಕೊಳ್ಳುತ್ತಾ ಅನುಗೌಡ ಹೆತ್ತವರು ವಾಸವಾಗಿದ್ದರು. ಬೆಂಗಳೂರಿನಿಂದ ಆಗಾಗ ಬರುತ್ತಿದ್ದ ಅನು ಗೌಡ ಅವರಿಗೆ ಸ್ಥಳೀಯ ನಿವಾಸಿಗಳಾದ ನೀಲಮ್ಮ ಮತ್ತು ಮೋಹನ್ ಜಮೀನು ವಿಚಾರದಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ. ಈ ಬಗ್ಗೆ ಸಾಗರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article