-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಟೆಕ್ಕಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಟೆಕ್ಕಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ


ಬೆಂಗಳೂರು: ನಗರದ ಜೋಗುಪಾಳ್ಯ ಎಂಬಲ್ಲಿ‌ ಟೆಕ್ಕಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದಿವ್ಯಾ (30) ಮೃತಪಟ್ಟ ದುರ್ದೈವಿ.

2014ರಲ್ಲಿ ದಿವ್ಯಾ ವಿವಾಹವಾಗಿದೆ. ಆದರೆ ಪತಿ ಹಾಗೂ ಆತನ ಕುಟುಂಬಸ್ಥರು ಮಾನಸಿಕ ಕಿರುಕುಳ ನೀಡುತ್ತಾರೆಂದು ಆರೋಪ ಕೇಳಿ ಬಂದಿತ್ತು. ಸೋಮವಾರ ದಿವ್ಯಾ ಪತಿ ಅರವಿಂದ್ ಆಕೆಯ ತವರುಮನೆಗೆ ಕರೆ ಮಾಡಿ 'ದಿವ್ಯಾ ಕೋಣೆಯೊಳಗಿಂದ ಲಾಕ್ ಮಾಡಿಕೊಂಡಿದ್ದಾಳೆ. ಎಷ್ಟು ಕರೆದರೂ ಬಾಗಿಲು ತೆಗೆಯುತ್ತಿಲ್ಲ' ಎಂದು ಮಾಹಿತಿ ನೀಡಿದ್ದಾನೆ. ವಿಚಾರ ತಿಳಿದು ಅವರು ಪುತ್ರಿ ಮನೆಗೆ ದೌಡಾಯಿಸಿದ್ದಾರೆ. ಕುಟುಂಬಸ್ಥರು ಬರುವ ವೇಳೆಗೆ ದಿವ್ಯಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಮೃತಳ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಈ ಕುರಿತು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಪತಿ ಅರವಿಂದನನ್ನು ವಶಕ್ಕೆ ಪಡೆದಿದ್ದಾರೆ.

Ads on article

Advertise in articles 1

advertising articles 2

Advertise under the article