-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಈತ ಭಯಾನಕ‌ ಸಾಹಸಿ: ಕ್ರೂರ ಚಿರತೆಯನ್ನೇ ಬೈಕ್ ಹಿಂದಕ್ಕೆ ಕಟ್ಟಿಕೊಂಡು ಅರಣ್ಯ ಇಲಾಖೆಗೊಪ್ಪಿಸಿದ

ಈತ ಭಯಾನಕ‌ ಸಾಹಸಿ: ಕ್ರೂರ ಚಿರತೆಯನ್ನೇ ಬೈಕ್ ಹಿಂದಕ್ಕೆ ಕಟ್ಟಿಕೊಂಡು ಅರಣ್ಯ ಇಲಾಖೆಗೊಪ್ಪಿಸಿದ


ಹಾಸನ: ಕ್ರೂರ ಕಾಡುಪ್ರಾಣಿಗಳನ್ನು ಕಂಡರೆ ಹೆದರಿ ಓಡಿ ಹೋಗುವವರೇ ಎಲ್ಲರೂ. ಆದರೆ ಇಲ್ಲೊಬ್ಬನ ಸಾಹಸ ಕಂಡು ಎಲ್ಲರೂ ಬೆರಗಾಗಿ ಹೋಗಿದ್ದಾರೆ. ಈತ ಚಿರತೆಯೊಂದನ್ನು ಹಿಡಿದಿದ್ದಲ್ಲದೆ ಅದನ್ನು ತನ್ನ ಬೈಕ್‌ ಹಿಂಭಾಗಕ್ಕೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ್ದಾನೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಬಾಗಿವಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೇಣುಗೋಪಾಲ್ ಅಲಿಯಾಸ್ ಮುತ್ತು ಈ ಸಾಹಸ ಮೆರೆದ ವ್ಯಕ್ತಿ. ಈತ ಚಿರತೆಯನ್ನು ಬೈಕ್ ಹಿಂಬಾಕ್ಕೆ ಕಟ್ಟಿಕೊಂಡು ಹೋಗುತ್ತಿರುವುದನ್ನು ಸ್ಥಳೀಯರು ವೀಡಿಯೋ ಮಾಡಿಕೊಂಡು ಎಲ್ಲೆಡೆ ಹರಿದಾಡಲು ಆರಂಭಿಸಿದೆ.

ವೇಣುಗೋಪಾಲ್ ಬೆಳಗ್ಗೆ ತನ್ನು ಜಮೀನಿಗೆ ಹೋದಾಗ ಚಿರತೆಯೊಂದು ಕಾಣಿಸಿಕೊಂಡಿದೆ. ಆತ ಧೈರ್ಯದಿಂದ ಅದನ್ನು ಎದುರಿಸಿ ಚಿರತೆಯನ್ನು ಹಿಡಿದಿದ್ದಾನೆ. ಹಿಡಿದ ಚಿರತೆಯನ್ನು ಬೈಕ್ ಹಿಂಭಾಗಕ್ಕೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾನೆ. ಗಂಡಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಚಿರತೆಗೆ ಗಂಡಸಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

Ads on article

Advertise in articles 1

advertising articles 2

Advertise under the article