-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಪ್ಪಿನಂಗಡಿ ಯುವಕ ದುಬೈನಲ್ಲಿ ಅನುಮಾನಾಸ್ಪದ ಸಾವು

ಉಪ್ಪಿನಂಗಡಿ ಯುವಕ ದುಬೈನಲ್ಲಿ ಅನುಮಾನಾಸ್ಪದ ಸಾವು


ಉಪ್ಪಿನಂಗಡಿ: ಇಲ್ಲಿನ ಯುವಕನೋರ್ವ ದುಬೈನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. 

ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ನಿವಾಸಿ ರಾಝಿಕ್ ಕುಪ್ಪೆಟ್ಟಿ (24) ಮೃತಪಟ್ಟ ಯುವಕ.

ಹೊಟೇಲ್ ಕೊಠಡಿಯಲ್ಲಿ ಮಲಗಿದ್ದ ಇವರು ಬೆಳಗ್ಗೆ ಎದ್ದೇಳದಿರುವುದನ್ನು ಕಂಡು ಹೊಟೇಲ್ ನವರು ಪರಿಶೀಲನೆ ನಡೆಸಿದಾಗ ಅವರು ಮೃತಪಟ್ಟಿರುವುದು ತಿಳಿದು ಬಂದಿದೆ‌. ಈ ಅಸಹಜ ಸಾವಿನ ಬಗಗೆ ಹಲವಾರು ಅನುಮಾನಗಳು ಹುಟ್ಟಿದೆ. ಇವರು ಕಳೆದ ಸಮಯಗಳ ಹಿಂದೆಯಷ್ಟೇ ಊರಿಗೆ ಬಂದು ವಿವಾಹವಾಗಿದ್ದರು. ಬಳಿಕ ಉದ್ಯೋಗದ ನಿಮಿತ್ತ ಮತ್ತೆ ದುಬೈಗೆ ತೆರಳಿದ್ದರು. ರಾಝಿಕ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Ads on article

Advertise in articles 1

advertising articles 2

Advertise under the article