-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿನಲ್ಲಿ ರೈಲಿನಲ್ಲಿ  FIGHT- ಕತ್ತಿ ಹಿಡಿದು ದಾಂಧಲೆ

ಮಂಗಳೂರಿನಲ್ಲಿ ರೈಲಿನಲ್ಲಿ FIGHT- ಕತ್ತಿ ಹಿಡಿದು ದಾಂಧಲೆ

ಮಂಗಳೂರು: ರೈಲಿನಲ್ಲಿ ಕುಡಿದ ಮತ್ತಿನಲ್ಲಿ ಕತ್ತಿಯಿಂದ ದಾಳಿ ನಡೆಸಿ ಇಬ್ಬರು ಆತಂಕ ಸೃಷ್ಟಿಸಿದ ಘಟನೆ ಜೂನ್ 30 ರಂದು ನಡೆದಿದೆ

ಇಬ್ಬರನ್ನು ಮಂಗಳೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.   ಶುಕ್ರವಾರ ದಾದರ್‌ನಿಂದ ತಿರುನಲ್ವೇಲಿಗೆ ತೆರಳುತ್ತಿದ್ದ ರೈಲಿನಲ್ಲಿ ಇಬ್ಬರು ವ್ಯಕ್ತಿಗಳು ಸುರತ್ಕಲ್ ಮತ್ತು ತೋಕೂರು ರೈಲ್ವೆ ಹಳಿಗಳ ನಡುವೆ ಕತ್ತಿಗಳಿಂದ ದಾಂಧಲೆ ನಡೆಸಿ ಆತಂಕ ಸೃಷ್ಟಿಸಿದ್ದಾರೆ.  ಈ  ಇಬ್ಬರನ್ನು ಬಂಧಿಸಿ ಎರಡು ಕತ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಮಿಳುನಾಡಿನ ಜಯಪ್ರಭು ಮತ್ತು ಪ್ರಸಾದ್ ಬಂಧಿತ ವ್ಯಕ್ತಿಗಳು. ಇವರು ಗೋವಾದಿಂದ ತಿರುನಲ್ವೇಲಿ ಗೆ ಪ್ರಯಾಣಿಸುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಇವರಿಬ್ಬರು ಸುರತ್ಕಲ್ ಮತ್ತು ತೋಕೂರು ಮಧ್ಯೆ ಕತ್ತಿ ಹಿಡಿದು ದಾಂಧಲೆ ನಡೆಸಿದ್ದಾರೆ

 ರೈಲು ಸಂಖ್ಯೆ 22629 ರಲ್ಲಿ ಈ ಘಟನೆ ಸಂಭವಿಸಿದ್ದು ಆರೋಪಿಗಳು  ತಮಿಳು ಭಾಷೆಯಲ್ಲಿ ಮಾತನಾಡುತ್ತಿದ್ದರು. ಇಬ್ಬರೂ ಕತ್ತಿಗಳನ್ನು ತೆಗೆದು ದಾಂಧಲೆ ನಡೆಸಲು ಪ್ರಾರಂಭಿಸುತ್ತಿದ್ದಂತೆ, ಎಸ್ 7 ರಿಸರ್ವೇಶನ್ ಕಂಪಾರ್ಟ್‌ಮೆಂಟ್‌ನ ಪ್ರಯಾಣಿಕರು ಭಯದಿಂದ ಜನರಲ್ ಕಂಪಾರ್ಟ್‌ಮೆಂಟ್ ನತ್ತ  ಓಡಿದ್ದಾರೆ.  ಆದರೆ, ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (ಟಿಟಿಇ) ಬಾಬು ಕೆ, ಶ್ರೀನಿವಾಸ್ ಶೆಟ್ಟಿ ಮತ್ತು ತಿಮ್ಮಪ್ಪ ಗೌಡ ರಿಸ್ಕ್ ತೆಗೆದುಕೊಂಡು ಇಬ್ಬರು ವ್ಯಕ್ತಿಗಳ ಕೈಯಿಂದ ಕತ್ತಿಗಳನ್ನು ತೆಗೆದುಕೊಂಡು ಅವರಿಬ್ಬರನ್ನು ಹಿಡಿದಿಟ್ಟುಕೊಂಡಿದ್ದಾರೆ.  ನಂತರ ಅವರನ್ನು ಮಂಗಳೂರಿನ ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ.
 
 

 
 ಆರೋಪಿಗಳು ಕುಡಿದ ಮತ್ತಿನಲ್ಲಿ ಕತ್ತಿಯಿಂದ ದಾಳಿ ಮಾಡಿದ್ದಾರೆ. ಇವರು ಗೋವಾದಲ್ಲಿ ರೈಲು ಹತ್ತಿದ್ದರು. ಇಬ್ಬರನ್ನು ಬಂಧಿಸಲಾಗಿದೆ ಕತ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ರೈಲಿನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಮಂಗಳೂರು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ