-->
1000938341
ಕೋಡಿಮಠದ ಶ್ರೀಗಳಿಂದ ಮತ್ತೆ ಭವಿಷ್ಯ: ಕರ್ನಾಟಕದಲ್ಲಿ ಜಲಪ್ರಳಯ, ಒಂದೆರಡು ದೇಶಗಳು ಮುಚ್ಚಿಹೋಗಲಿದೆ

ಕೋಡಿಮಠದ ಶ್ರೀಗಳಿಂದ ಮತ್ತೆ ಭವಿಷ್ಯ: ಕರ್ನಾಟಕದಲ್ಲಿ ಜಲಪ್ರಳಯ, ಒಂದೆರಡು ದೇಶಗಳು ಮುಚ್ಚಿಹೋಗಲಿದೆ



ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಮಳೆ ದೂರವಾಗಿದ್ದು, ನೀರಿಗೆ ಹಾಹಾಕಾರ ನಡೆದಿತ್ತು. ಹಾಗಿದ್ದರೂ, ಈ ಬಾರಿ ರಾಜ್ಯದಲ್ಲಿ ಜಲಪ್ರಳಯವಾಗಲಿದೆ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಈ ಬಾರಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ. ಸ್ಥಿರ ಸರ್ಕಾರವು ರಚನೆಯಾಗಲಿದೆ ಎಂದು ಚುನಾವಣಾ ಪೂರ್ವದಲ್ಲಿ ಅವರು ಭವಿಷ್ಯ ನುಡಿದಿದ್ದರು. ಇದೋಗ ಮತ್ತೆ ಭವಿಷ್ಯ ನುಡಿದಿರುವ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಯವರು ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದ್ದು, ಜಲಪ್ರಳಯ ಆಗುವ ಲಕ್ಷಣವಿದೆ ಎಂದು ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಮೂರು ಗಂಡಾಂತರಗಳು ನಡೆಯಲಿದ್ದು, ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳಲಿದ್ದಾರೆ. ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗುವ ಲಕ್ಷಣವೂ ಇದೆ ಎಂದು ಶ್ರೀಗಳು ಹೇಳಿದ್ದಾರೆ. ಜನರು ಅಕಾಲಿಕ ಮೃತ್ಯುಗೀಡಾಗುವ ಸೂಚನೆ ಇದೆ. ವಿಜಯದಶಮಿಯಿಂದ ಸಂಕ್ರಾಂತಿವರೆಗೆ ದುರ್ಘಟನೆಗಳು ಸಂಭವಿಸಲಿದೆ. ಆವರೆಗೆ ಜಗತ್ತಿನಲ್ಲಿ ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸ್ವಾಮೀಜಿ ಹೇಳಿದ್ದಾರೆ.

ಕರುನಾಡಿಗೆ ಕೆಲವೊಂದು ಆಪತ್ತುಗಳಿವೆ. ಕೆಲ ಸಾವು ನೋವುಗಳು ಆಗಲಿವೆ. ಆದರೆ, ದೈವ ಕೃಪೆಯಿಂದ ಪಾರಾಗಬಹುದು. ಭಾರತದಲ್ಲಿ ನಾನು ಹೇಳಿದಂತೆ ಒಂದು ಘಟನೆ ಸಂಭವಿಸಲಿದೆ. ತಪ್ಪಿಸುವ ಹೊಣೆಗಾರಿಕೆ ಆಳುವವರ ಕೈಯಲ್ಲಿದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಬಡವರಿಗೆ ಗ್ಯಾರಂಟಿ ಒಳ್ಳೆಯದೇ. ಯಾವ ಹೆಣ್ಣಿಗೆ ಸ್ವತಂತ್ರ ಇರಲಿಲ್ಲವೋ ಅಂಥ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬರುವಂತಾಗಿದೆ ಎಂದವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article