-->
1000938341
ಹೆದ್ದಾರಿ ಗುಂಡಿಯಿಂದ ಅಪಘಾತವಾಗಿ ಸಾವು- NHIA ಗೆ ನೋಟೀಸ್ ನೀಡಲು ಪೊಲೀಸರ ನಿರ್ಧಾರ

ಹೆದ್ದಾರಿ ಗುಂಡಿಯಿಂದ ಅಪಘಾತವಾಗಿ ಸಾವು- NHIA ಗೆ ನೋಟೀಸ್ ನೀಡಲು ಪೊಲೀಸರ ನಿರ್ಧಾರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಂಪಾಡಿ- ಪಣಂಬೂರು ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಸಂಬಂಧ, ಈ ಹೆದ್ದಾರಿಯ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಿಲ್ಲ ಎಂಬ ಕಾರಣಕ್ಕೆ NHIA ಗೆ ನೋಟಿಸ್ ನೀಡಲು ಮಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಈ ಅಪಘಾತದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸುವ ಭರದಲ್ಲಿ ಸ್ಕೂಟ‌ರ್ ಸವಾರ, ಕೆಂಜಾರು ನಿವಾಸಿ ಟೈಟಸ್ ಫೆರಾವೊ (69) ಅವರು ಚಲಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತ ಪಟ್ಟಿದ್ದರು.

ರಸ್ತೆ ಗುಂಡಿಯಿಂದಾಗಿ ಅಪಘಾತ ಸಂಭವಿಸಿದರೆ, ಆ ರಸ್ತೆಯ ನಿರ್ವಹಣೆಯ ಹೊಣೆ ಹೊತ್ತಿರುವ ಇಲಾಖೆ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಆದರೆ, ರಸ್ತೆ ಗುಂಡಿಯಿಂದಾಗಿ ಸಂಭವಿಸುವ ಅಪಘಾತ ಪ್ರಕರಣಗಳಲ್ಲೂ ಸಂಚಾರ ಪೊಲೀಸರು ಸಂಬಂಧ ಪಟ್ಟ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕ ರ ಆಕ್ರೋಶ ಕೇಳಿಬಂದಿತ್ತು.

ಈ ಬಗ್ಗೆ ಮಂಗಳೂರು  ನಗರ ಪೊಲೀಸ್‌ ಕಮಿಷನರ್ ಕುಲದೀಪ್‌ ಕುಮಾರ್ ಆರ್ ಜೈನ್ ಪ್ರತಿಕ್ರಿಯಿಸಿ 'ಈ ಬಗ್ಗೆ ತನಿಖೆ ನಡೆಸುತ್ತೇವೆ. ಎನ್‌ಎಚ್‌ಎಐಗೂ ನೋಟಿಸ್‌ ನೀಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ' ಎಂದು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article