-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹೆದ್ದಾರಿ ಗುಂಡಿಯಿಂದ ಅಪಘಾತವಾಗಿ ಸಾವು- NHIA ಗೆ ನೋಟೀಸ್ ನೀಡಲು ಪೊಲೀಸರ ನಿರ್ಧಾರ

ಹೆದ್ದಾರಿ ಗುಂಡಿಯಿಂದ ಅಪಘಾತವಾಗಿ ಸಾವು- NHIA ಗೆ ನೋಟೀಸ್ ನೀಡಲು ಪೊಲೀಸರ ನಿರ್ಧಾರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಂಪಾಡಿ- ಪಣಂಬೂರು ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಸಂಬಂಧ, ಈ ಹೆದ್ದಾರಿಯ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಿಲ್ಲ ಎಂಬ ಕಾರಣಕ್ಕೆ NHIA ಗೆ ನೋಟಿಸ್ ನೀಡಲು ಮಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಈ ಅಪಘಾತದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸುವ ಭರದಲ್ಲಿ ಸ್ಕೂಟ‌ರ್ ಸವಾರ, ಕೆಂಜಾರು ನಿವಾಸಿ ಟೈಟಸ್ ಫೆರಾವೊ (69) ಅವರು ಚಲಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತ ಪಟ್ಟಿದ್ದರು.

ರಸ್ತೆ ಗುಂಡಿಯಿಂದಾಗಿ ಅಪಘಾತ ಸಂಭವಿಸಿದರೆ, ಆ ರಸ್ತೆಯ ನಿರ್ವಹಣೆಯ ಹೊಣೆ ಹೊತ್ತಿರುವ ಇಲಾಖೆ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಆದರೆ, ರಸ್ತೆ ಗುಂಡಿಯಿಂದಾಗಿ ಸಂಭವಿಸುವ ಅಪಘಾತ ಪ್ರಕರಣಗಳಲ್ಲೂ ಸಂಚಾರ ಪೊಲೀಸರು ಸಂಬಂಧ ಪಟ್ಟ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕ ರ ಆಕ್ರೋಶ ಕೇಳಿಬಂದಿತ್ತು.

ಈ ಬಗ್ಗೆ ಮಂಗಳೂರು  ನಗರ ಪೊಲೀಸ್‌ ಕಮಿಷನರ್ ಕುಲದೀಪ್‌ ಕುಮಾರ್ ಆರ್ ಜೈನ್ ಪ್ರತಿಕ್ರಿಯಿಸಿ 'ಈ ಬಗ್ಗೆ ತನಿಖೆ ನಡೆಸುತ್ತೇವೆ. ಎನ್‌ಎಚ್‌ಎಐಗೂ ನೋಟಿಸ್‌ ನೀಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ' ಎಂದು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ