-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ರೀತಿಗೆ ಮನೆಯಲ್ಲಿ ಒಪ್ಪಿಗೆ ಸಿಗೋಲ್ಲವೆಂಬ ಭೀತಿ: ಪ್ರಿಯಕರನ ಮನೆಯಲ್ಲಿ ನಡೆಯಿತು ಘನಘೋರ ಕೃತ್ಯ

ಪ್ರೀತಿಗೆ ಮನೆಯಲ್ಲಿ ಒಪ್ಪಿಗೆ ಸಿಗೋಲ್ಲವೆಂಬ ಭೀತಿ: ಪ್ರಿಯಕರನ ಮನೆಯಲ್ಲಿ ನಡೆಯಿತು ಘನಘೋರ ಕೃತ್ಯ


ಸಿದ್ದಿಪೇಟ್: ಪ್ರೀತಿಗೆ ಹಿರಿಯರಿಂದ ಒಪ್ಪಿಗೆ ದೊರಕುವುದಿಲ್ಲವೆಂಬ ಭಯದಲ್ಲಿ ಪ್ರೇಮಿಗಳಿಬ್ಬರು ಸಾವಿನ ಶರಣಾರುವ ಘಟನೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆ ದುಬ್ಬಾಕ ಮಂಡಲದ ಲಟ್ಟಾಪೇಟೆಯಲ್ಲಿ ನಡೆದಿದೆ.

ದುಬ್ಬಾಕ ಮಂಡಲದ ಜೂನಿಯರ್ ಕಾಲೇಜಿನ ಪಿಯು ವಿದ್ಯಾರ್ಥಿಳಾದ ಕರುಪಾತಿ ಭಗೀರಥ (17) ಮತ್ತು ಥೋಡ್ತಾ ನೇಹಾ (16) ಮೃತಪ್ರೇಮಿಗಳು. ಇಬ್ಬರು ಲಟ್ಟಾಪೇಟೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.  

ಇಬ್ಬರು ಪ್ರೀತಿಯ ಬಲೆಗೆ ಬಿದ್ದಿದ್ದರು. ಆದರೆ, ತಮ್ಮ ಪ್ರೀತಿಗೆ ಹಿರಿಯರು ಒಪ್ಪಿಗೆ ನೀಡುವುದಿಲ್ಲ. ಮುಂದಿನ ದಿನಗಳಲ್ಲಿ ಇಬ್ಬರು ಬೇರೆಯಾಗುತ್ತೇವೆ ಎಂಬ ಭಯ ಇಬ್ಬರಲ್ಲೂ ಕಾಡುತ್ತಿತ್ತು. ಇದೇ ಭಯದಲ್ಲಿ ದುಡುಕಿನ ನಿರ್ಧಾರ ತೆಗೆದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಸಂಜೆ ಭಗೀರಥನ ಪಾಲಕರು ಮನೆಯಿಂದ ಹೊರ ಹೋಗಿದ್ದ ಸಂದರ್ಭ ಆತನ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮೃತದೇಹಗಳನ್ನು ದುಬ್ಬಾಕಾದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಪಾಲಕರಿಗೆ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article