-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ರೀತಿಸಿ ಓಡಿಹೋಗಿ ಮದುವೆಯಾದ ಪುತ್ರಿ: ಮನನೊಂದು ತಾಯಿ ನೇಣಿಗೆ ಶರಣು

ಪ್ರೀತಿಸಿ ಓಡಿಹೋಗಿ ಮದುವೆಯಾದ ಪುತ್ರಿ: ಮನನೊಂದು ತಾಯಿ ನೇಣಿಗೆ ಶರಣು


ಗದಗ: ಯುವಕನನ್ನು ಪ್ರೀತಿಸಿ ಮನೆತೊರೆದು ಅತನೊಂದಿಗೆ ಮದುವೆಯಾಗಿರುವ ಯುವತಿಯ ತಾಯಿ ತೀವ್ರವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ‌ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ನಡೆದಿದೆ.

ಶಿರೋಳ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಸುನೀತಾ ನಾಯಕವಾಡಿ (48) ಆತ್ಮಹತ್ಯೆ ಮಾಡಿಕೊಂಡ ತಾಯಿ.

ಸುನೀತಾ ನಾಯಕವಾಡಿಯವರ ಪುತ್ರಿ ಸುಷ್ಮಾ ಅದೇ ಗ್ರಾಮದ ಪರಯ್ಯ ಹಿರೇಮಠ ಎನ್ನುವ ಯುವಕನನ್ನು ಪ್ರೀತಿಸುತ್ತಿದ್ದಳು. ಕಳೆದ ನಾಲ್ಕು ತಿಂಗಳ ಹಿಂದೆ ಮನೆ ತೊರೆದು ಆತನನ್ನು ಮದುವೆಯಾಗಿದ್ದಳು. ಪ್ರೇಮ ವಿವಾಹವಾದ ಬಳಿಕ ಅವರು ಬೆಂಗಳೂರಿನಲ್ಲಿ ನೆಲೆಸಿದ್ದಳು.

ಪುತ್ರಿ ಓಡಿಹೋಗಿ ಮದುವೆಯಾಗಿದ್ದರಿಂದ ತೀವ್ರವಾಗಿ ನೊಂದು, ಜೀವನದಲ್ಲಿ ಜಿಗುಪ್ಸೆಗೊಂಡ ಈಕೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ