-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Sulya:-ನದಿ ನೀರಿಗೆ ಬಿದ್ದು ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ.

Sulya:-ನದಿ ನೀರಿಗೆ ಬಿದ್ದು ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ.

ಸುಳ್ಯ

ಸುಳ್ಯ ತಾಲೂಕಿನ ಆಲೆಟ್ಟಿ ಕೂರ್ನಡ್ಕದಲ್ಲಿ ಅಡಿಕೆ ಮರದ ಕಿರು ಸೇತುವೆ ದಾಟುತ್ತಿದ್ದ ಸಂದರ್ಭದಲ್ಲಿ ನೀರಿಗೆ ಬಿದ್ದು ನಾಪತ್ತೆಯಾದ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ.

ಸುಳ್ಯಕ್ಕೆ ತೋಟದ ಕೆಲಸಕ್ಕೆಂದು ಬಂದ ಕಾಸರಗೋಡು ಚಿಟ್ಟಾರಿಕ್ಕಲ್ ನಿವಾಸಿ ನಾರಾಯಣ (45) ಎಂಬವರು ಸುಳ್ಯದ ಆಲೆಟ್ಟಿ ಗ್ರಾಮದ ಹೊನ್ನೇದಿ ಎಂಬಲ್ಲಿ ಜುಲೈ 6ರಂದು ಸಾಯಂಕಾಲ ನಾಲ್ಕು ಗಂಟೆ ಸುಮಾರಿಗೆ ನದಿ ದಾಟುತ್ತಿದ್ದಾಗ ಕಿರುಸೇತುವೆಯಿಂದ ನದಿಗೆ ಬಿದ್ದು ಕಣ್ಣರೆಯಾಗಿದ್ದರು.
ಇದೀಗ ನಾಲ್ಕನೇ ದಿನವೂ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿರುವ ಸಮಯದಲ್ಲಿ ನದಿಗೆ ನಾರಾಯಣ ಅವರು ಬಿದ್ದ ಸ್ಥಳದಿಂದ ಸುಮಾರು ನಾಲ್ಕು ಕಿ.ಮೀ ಕೆಳಗಡೆ ಮೃತದೇಹ ಪತ್ತೆಯಾಗಿದೆ.

Ads on article

Advertise in articles 1

advertising articles 2

Advertise under the article