-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತಂದೆಯಿಂದಲೇ 8 ತಿಂಗಳ ಮಗು ಅಪಹರಣ!

ತಂದೆಯಿಂದಲೇ 8 ತಿಂಗಳ ಮಗು ಅಪಹರಣ!


ಚಿಂಚೋಳಿ: ಚಿಂಚೋಳಿ ತಾಲೂಕಿನ ಯಂಪಳ್ಳಿ ಗ್ರಾಮದಲ್ಲಿ ಸ್ವತಃ ತಂದೆಯೇ ಗುಂಪು ಕಟ್ಟಿಕೊಂಡು 8 ತಿಂಗಳ  ಮಗುವನ್ನು ಅಪಹರಣ ಮಾಡಿದ ಘಟನೆ ಭಾನುವಾರ ಚಿಂಚೋಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

 ಶರಣಪ್ಪ ಎಂಬಾತನೇ ಮಗು ಅಪಹರಣ ಮಾಡಿದ ತಂದೆ. ಬೀದ‌ರ್ ಜಿಲ್ಲೆಯ ಚಿಟಗುಪ್ಪ ಗ್ರಾಮದ ಶರಣಪ್ಪನ ಜತೆಗೆ ಮದುವೆಯಾಗಿದ್ದ ಗೌರಮ್ಮಳಿಗೆ ಪತಿಯ ಮನೆಯವರು ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಯಾರು ಹೇಳಿದರೂ ಕೇಳದಿದ್ದಾಗ ಗೌರಮ್ಮಳನ್ನು ತಂದೆ ತವರು ಮನೆಗೆ ಕರೆದುಕೊಂಡು ಬಂದಿದ್ದರು. 
 
ತವರಿನಲ್ಲಿ ಗೌರಮ್ಮ ಗಂಡು ಮಗುವಿಗೆ ಜನ್ಮ ನೀಡಿ ನಂತರ ಸಂಬಂಧಿಕರು ರಾಜಿ ಸಂಧಾನ ಮಾಡಿಸಿ ಮತ್ತೆ `ಗಂಡನ ಮನೆಗೆ ಕಳುಹಿಸಿದ್ದರು. ಗಂಡನ ಮನೆಯವರು ಮತ್ತೆ ಜಗಳ ಶುರು ಮಾಡಿದ್ದರಿಂದ ಗೌರಮ್ಮಳನ್ನು ತಂದೆ ಮತ್ತೆ ತವರಿಗೆ ಕರೆದುಕೊಂಡು ಬಂದಿದ್ದಾರೆ. 

ಭಾನುವಾರ ಬೆಳಗಿನ ಜಾವ ವಾಹನಗಳಲ್ಲಿ ಕೆಲವರನ್ನು ಗುಂಪು ಕಟ್ಟಿಕೊಂಡು ಬಂದು ಮಾವನ ಮನೆಗೆ ನುಗ್ಗಿ ಪತ್ನಿ ಮತ್ತು ಅತ್ತೆ ಜತೆ ತೆಗೆದು ತಿಂಗಳ ಮಗುವನ್ನು 8 ಅಪಹರಣ ಮಾಡಿಕೊಂಡು ಓಡಿ ಹೋಗಿದ್ದಾನೆ. ಈ ವೇಳೆ ಗ್ರಾಮಸ್ಥರು ಅಡ್ಡ ಬಂದು ಅಪಹರಣಕಾರರನ್ನು ಹಿಡಿಯಲು ಪ್ರಯತ್ನ ಮಾಡಿದ್ದಾರೆ. ಇವರಲ್ಲಿ ಒಬ್ಬ ವ್ಯಕ್ತಿ ಸಿಕ್ಕಿ ಬಿದ್ದಿದ್ದು, ಆತನನ್ನು ಗಿಡಕ್ಕೆ ಕಟ್ಟಿಹಾಕಿ ವಿಚಾರಣೆ ನಡೆಸಿದಾಗ ಎಲ್ಲವನ್ನು ಬಾಯಿ ಬಿಟ್ಟಿದ್ದಾನೆ

Ads on article

Advertise in articles 1

advertising articles 2

Advertise under the article

ಸುರ