-->
ಪ್ರವಾಸಿ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ : 9ಮಂದಿ ಸಾವು, 20ಮಂದಿ ಗಾಯ

ಪ್ರವಾಸಿ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ : 9ಮಂದಿ ಸಾವು, 20ಮಂದಿ ಗಾಯ


ಚೆನ್ನೈ: ಮಧುರೈ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಲಕ್ಷ್ಮೀ-ರಾಮೇಶ್ವರಂ ಪ್ರವಾಸಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಮಂದಿ ಮೃತಪಟ್ಟು, 20ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ವರದಿಯ ಪ್ರಕಾರ ರೈಲಿನಲ್ಲಿದ್ದ ಪ್ರವಾಸಿಗರು ಮುಂಜಾನೆ ಅಡುಗೆ ಮಾಡುತ್ತಿದ್ದಾಗ ಸಿಲಿಂಡರ್ ಸೋರಿಕೆಯಾಗಿ ಈ ಸ್ಫೋಟವಾಗಿದೆ ಎಂದು ತಿಳಿದು ಬಂದಿದೆ.

ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ. ಆದರೆ ರೈಲಿನ ಕೊನೆಯ ಎರಡು ಬೋಗಿಗಳು ಸಂಪೂರ್ಣ ಸುಟ್ಟು ಹೋಗಿದೆ. ಈ ರೈಲು ಮೇ 17 ರಂದು ಲಕ್ನೋದಿಂದ ಆಧ್ಯಾತ್ಮಿಕ ಪ್ರವಾಸಕ್ಕೆ ಹೊರಟಿತ್ತು.

90 ಮಂದಿ ಉತ್ತರಪ್ರದೇಶದ ಪ್ರಯಾಣಿಕರು ಈ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಈ ರೈಲು ತಿರುಪತಿ - ರಾಮೇಶ್ವರಂ - ಕನ್ಯಾಕುಮಾರಿ ಮುಂತಾದ ಸ್ಥಳಗಳಿಗೆ ಪ್ರಯಾಣಿಸಬೇಕಿತ್ತು. ಆದರೆ ಮಧುರೈನಲ್ಲಿ ಏಕಾಏಕಿ ರೈಲುಬೋಗಿಯಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ರೈಲನ್ನು ನಿಲ್ಲಿಸಲಾಗಿದೆ. ಬೆಂಕಿ ಹರಡಿದ ಕಂಪಾರ್ಟ್ ಮೆಂಟ್ ಅನ್ನು ಮಾತ್ರ ರೈಲ್ವೆ ಇಲಾಖೆ ಪ್ರತ್ಯೇಕಿಸಿದೆ. ಬಾಕ್ಸ್ ಗೆ ವ್ಯಾಪಿಸಿದ ಬೆಂಕಿಯನ್ನು ಅಗ್ನಿಶಾಮಕದಳದವರು ಸಂಪೂರ್ಣವಾಗಿ ನಂದಿಸಿದ್ದಾರೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article