-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಟಿಪ್ಪರ್ ಡಿಕ್ಕಿ - ಸ್ಕೂಟರ್ ಸವಾರ ಎಸ್ಎಸ್ಎಲ್ ಸಿ ವಿದ್ಯಾರ್ಥಿ ದುರ್ಮರಣ

ಮಂಗಳೂರು: ಟಿಪ್ಪರ್ ಡಿಕ್ಕಿ - ಸ್ಕೂಟರ್ ಸವಾರ ಎಸ್ಎಸ್ಎಲ್ ಸಿ ವಿದ್ಯಾರ್ಥಿ ದುರ್ಮರಣ


ಮಂಗಳೂರು: ನಗರ ಹೊರವಲಯದ ಅಡ್ಯಾರ್ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸ್ಕೂಟರ್ ಹಿಂಬದಿ ಸವಾರ, ಎಸ್ಎಸ್ಎಲ್ ಸಿ ವಿದ್ಯಾರ್ಥಿ ದುರ್ಮರಣಕ್ಕೀಡಾಗಿರುವ ಘಟನೆ  ನಡೆದಿದೆ.

ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಮೃತಪಟ್ಟ ವಿದ್ಯಾರ್ಥಿ. 

ನಗರದ ಮಿಲಾಗ್ರಿಸ್ ಶಾಲೆಯ ಎಸ್ಎಸ್ಎಲ್ ಸಿ ವಿದ್ಯಾರ್ಥಿಯಾಗಿದ್ದ ಶರಫುದ್ದೀನ್ ತನ್ನ ಸ್ನೇಹಿತನೊಂದಿಗೆ ಸ್ಕೂಟರಿನಲ್ಲಿ ಸವಾರಿ ಮಾಡುತ್ತಿದ್ದ. ಸ್ಕೂಟರ್ ಅಡ್ಯಾರ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಟಿಪ್ಪರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಶರಫುದ್ದೀನ್ ತಲೆಗೆ ಗಂಭೀರ ಗಾಯಗೊಂಡಿದೆ. 

ತೀವ್ರ ರಕ್ತಸ್ರಾವಗೊಂಡ ಅವರನ್ನು ತಕ್ಷಣ ಸ್ಥಳೀಯರು ಸಮೀಪದ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಬಂದಿದೆ.

Ads on article

Advertise in articles 1

advertising articles 2

Advertise under the article

ಸುರ