-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವೈದ್ಯನ ನಿರ್ಲಕ್ಷ್ಯಕ್ಕೆ ಯುವಕ ಬಲಿ: ಜ್ವರಕ್ಕೆ ಇಂಜೆಕ್ಷನ್ ಪಡೆದ ಬಹುಅಂಗಾಂಗ ವೈಫಲ್ಯದಿಂದ ಮೃತ್ಯು

ವೈದ್ಯನ ನಿರ್ಲಕ್ಷ್ಯಕ್ಕೆ ಯುವಕ ಬಲಿ: ಜ್ವರಕ್ಕೆ ಇಂಜೆಕ್ಷನ್ ಪಡೆದ ಬಹುಅಂಗಾಂಗ ವೈಫಲ್ಯದಿಂದ ಮೃತ್ಯು

ಬೆಂಗಳೂರು: ವೈದ್ಯನ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕನೋರ್ವನು ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ತೆಯಲ್ಲಿರುವ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. 

ಅಮರ್​ ಶೆಟ್ಟಿ(31) ಮೃತಪಟ್ಟ ಯುವಕ.

ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕೆ.ಪಿ.ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ವೈದ್ಯ ಹಾಗೂ ಕ್ಲಿನಿಕ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ದುಬೈನಲ್ಲಿದ್ದ ಅಮರ್​ ಶೆಟ್ಟಿ ಒಂದು ವರ್ಷದ ಹಿಂದೆ ತಾಯ್ನಾಡಿಗೆ ವಾಪಸ್​​ ಬಂದು ತಮ್ಮದೇ ಆದ ಹೋಟೆಲ್​ ಬಿಸಿನೆಸ್​ ಅನ್ನು ಆರಂಭಿಸಿದ್ದರು. ಆಗಸ್ಟ್​ 13ರಂದು ಜ್ವರ ಕಾಣಿಸಿಕೊಂಡಿದ್ದ ಕಾರಣ ಅಮರ್​ ಕೆ.ಪಿ. ಅಗ್ರಹಾರದಲ್ಲಿರುವ ಭಾಗ್ಯ ಕ್ಲಿನಿಕ್​ಗೆ ತೆರಳಿ ಇಂಜೆಕ್ಷನ್​ ಪಡೆದಿದ್ದರು.

ಇಂಜೆಕ್ಷನ್​ ಅಡ್ಡಪರಿಣಾಮದಿಂದ ಯುವಕನಿಗೆ ಜ್ವರ ಇಳೊದಿರಲಿಲ್ಲ. ತಕ್ಷಣವೇ ಅವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಯನ್ನು ದಾಖಲಿಸಿಕೊಂಡ ವೈದ್ಯರು ಪರೀಕ್ಷೆ ನಡೆಸಿ ಇಂಜೆಕ್ಷನ್​ ಅಡ್ಡಪರಿಣಾಮದಿಂದ ಬಹು ಅಂಗಾಂಗ ವೈಫಲ್ಯವಾಗಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಅಲ್ಲದೆ ಚಕಿತ್ಸೆ ಫಲಕಾರಿಯಾಗದೆ ಅಮರ್​ ಶೆಟ್ಟಿ ಶುಕ್ರವಾರ ನಿಧನರಾಗಿದ್ದಾರೆ. ವೈದ್ಯನ ನಿರ್ಲಕ್ಷಕ್ಷ್ಯಕ್ಕೆ ಯುವಕನ ಕುಟುಂಬಸ್ಥರು ಕಿಡಿಕಾರಿದ್ದು, ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕೆ.ಪಿ. ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ