ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರರಿಗೆ ಪತ್ನಿ ವಿಯೋಗ - ಬ್ಯಾಂಕಾಕ್ ನಲ್ಲಿ ಸ್ಪಂದನಾ ಹೃದಯಾಘಾತದಿಂದ ಸಾವು

ಬೆಂಗಳೂರು: ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಬ್ಯಾಂಕಾಕ್ ನಲ್ಲಿ ಹೃದಯಾಘಾತದಲ್ಲಿ ಮೃತಪಟ್ಟಿದ್ದಾರೆ.

ಬ್ಯಾಂಕಾಕ್‌ನಲ್ಲಿದ್ದ ಸ್ಪಂದನಾ ಅವರು ಏಕಾಏಕಿ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಸದ್ಯ ಅವರಿಗೆ ಲೋ ಬಿಪಿ ಹಾಗೂ ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಪೊಲೀಸ್ ಅಧಿಕಾರಿ ಶಿವರಾಂ‌ಅವರ ಪುತ್ರಿ ಸ್ಪಂದನಾರನ್ನು ನಟ ವಿಜಯ ರಾಘವೇಂದ್ರ 2007, ಆಗಸ್ಟ್ 26ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಇನ್ನೇನು ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿಯಿದೆ. ಈ ಸಂದರ್ಭದಲ್ಲೇ ಇಂತಹ ದುರಂತ ನಡೆದಿರುವುದು ಬಹಳ ಆಘಾತಕಾರಿ ಸಂಗತಿಯಾಗಿದೆ.

ವಿಜಯರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನಿಮಾದಲ್ಲಿ ಸ್ಪಂದನಾ ಅತಿಥಿ ಪಾತ್ರದಲ್ಲಿ ನಟಿಸಿದ್ದರು.

BREAKING NEWS
Loading latest news...
Join our WhatsApp Channel Powered By : Online Pudu