ಅಪಾರ್ಟ್‌ಮೆಂಟ್ 9ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ


ಬೆಂಗಳೂರು: ಅಪಾರ್ಟ್ ಮೆಂಟ್ ನ 9ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ.

ವಿಜಯಲಕ್ಷ್ಮಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

 ವಿದ್ಯಾರ್ಥಿನಿ ವಿಜಯಲಕ್ಷ್ಮಿ ಖಾಸಗಿ ಕಾಲೇಜಿನಲ್ಲಿ ಕಾಮರ್ಸ್‌ ವ್ಯಾಸಂಗ ಮಾಡುತ್ತಿದ್ದಳು. ತಂದೆ-ತಾಯಿಗೆ ವಿಚ್ಛೇದನವಾದ ಬಳಿಕ, ತನ್ನ ತಾಯಿ ಯಶೋಧರೊಂದಿಗೆ ಜ್ಞಾನಭಾರತಿಯ ಜ್ಞಾನಜ್ಯೋತಿನಗರದಲ್ಲಿ ವಾಸವಿದ್ದಳು. ಆದರೆ ಕಳೆದೊಂದು ವಾರದಿಂದ ವಿಜಯಲಕ್ಷ್ಮಿ ಖಿನ್ನತೆಗೆ ಜಾರಿದ್ದರು ಎಂದು ತಿಳಿದು ಬಂದಿದೆ. 

ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu