-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: 90ಲಕ್ಷ ಮೌಲ್ಯದ ಅಂಬರ್ ಗ್ರೀಸ್ ಹೊಂದಿದ್ದ ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: 90ಲಕ್ಷ ಮೌಲ್ಯದ ಅಂಬರ್ ಗ್ರೀಸ್ ಹೊಂದಿದ್ದ ಮೂವರು ಆರೋಪಿಗಳು ಅರೆಸ್ಟ್


ಮಂಗಳೂರು: ನಗರದ ಪಣಂಬೂರು ಬೀಚ್ ಬಳಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಹೊಂದಿರುವ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 90ಲಕ್ಷ ರೂ. ಮೌಲ್ಯದ ಅಂಬರ್ ಗ್ರೀಸ್ ವಶಪಡಿಸಿಕೊಂಡಿದ್ದಾರೆ.

ಉಡುಪಿ ಜಿಲ್ಲೆಯ ಸಾಲಿಗ್ರಾಮ ಗ್ರಾಮದ ನಿವಾಸಿ ಜಯಕರ (39) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ನಿವಾಸಿ ಆದಿತ್ಯ (25), ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕು ನಿವಾಸಿ ಲೋಹಿತ್ ಕುಮಾರ್ ಗುರಪ್ಪನವರ್ (39) ಬಂಧಿತ ಆರೋಪಿಗಳು. 

ಖಚಿತ ಮಾಹಿತಿ ಮೇರೆಗೆ ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಪಣಂಬೂರು ಬೀಚ್ ಬಳಿ ಇಂದು ದಾಳಿ ನಡೆಸಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಹೊಂದಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಬರ್ ಗ್ರೀಸ್ ಅಪರೂಪದ ವನ್ಯಜೀವಿ ಉತ್ಪನ್ನವಾಗಿದ್ದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚು ಬೆಲೆಯುಳ್ಳದ್ದಾಗಿದೆ. ಪೊಲೀಸರು ಆರೋಪಿಗಳಿಂದ 900 ಗ್ರಾಂ ತೂಕದ 90 ಲಕ್ಷ ರೂ. ಮೌಲ್ಯದ ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಂಡಿದ್ದಾರೆ.  

ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ