-->
ಕಾಫಿ ಮಾಡುತ್ತಿರುವಾಗಲೇ ದಂಪತಿಯನ್ನು ಕಾದಿತ್ತು ಭಯಾನಕ ಅವಘಡ

ಕಾಫಿ ಮಾಡುತ್ತಿರುವಾಗಲೇ ದಂಪತಿಯನ್ನು ಕಾದಿತ್ತು ಭಯಾನಕ ಅವಘಡ


ಕೋಲಾರ: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಯುವ ದಂಪತಿ ಗಂಭೀರವಾಗಿ ಗಾಯಗೊಂಡು ದಾರುಣವಾಗಿ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ಸಂಭವಿಸಿದೆ. 

ಕೋಲಾರದ ಮಧುಸೂದನ್ ಹಾಗೂ ನಂದಿನಿ ದುರ್ಘಟನೆಯಲ್ಲಿ ಸಾವಿಗೀಡಾದ ದಂಪತಿ. 

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುಪ್ಪಡಹಳ್ಳಿ ಗ್ರಾಮದಲ್ಲಿ ಸೆ.16ರಂದು ಈ ದುರ್ಘಟನೆ ಸಂಭವಿಸಿತ್ತು. ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂದನ್ ಅವರ ತೋಟದ ಮನೆಯಲ್ಲಿ ಈ ಅವಘಡ ಸಂಭವಿಸಿತ್ತು.

ಕಾಫಿ ಮಾಡುವ ವೇಳೆ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಅವಘಡವಾಗಿದೆ. ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ದಂಪತಿ ಇಬ್ಬರೂ ಸಾವಿಗೀಡಾಗಿದ್ದಾರೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article