-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಖಾಕಿ ಬಟ್ಟೆ ಧರಿಸಿದವರ ಮೇಲೆ ದಾಳಿ ಮಾಡಲು ತರಬೇತಿ : ನಾಯಿ ಸಾಕಾಣೆ ಕೇಂದ್ರದ ವ್ಯಕ್ತಿಗೆ ಪೊಲೀಸರೇ ಟಾರ್ಗೆಟ್

ಖಾಕಿ ಬಟ್ಟೆ ಧರಿಸಿದವರ ಮೇಲೆ ದಾಳಿ ಮಾಡಲು ತರಬೇತಿ : ನಾಯಿ ಸಾಕಾಣೆ ಕೇಂದ್ರದ ವ್ಯಕ್ತಿಗೆ ಪೊಲೀಸರೇ ಟಾರ್ಗೆಟ್


ಕೇರಳ: ಪೊಲೀಸರ ಕಣ್ಣು ತಪ್ಪಿಸಿ ಅಕ್ರಮ ಗಾಂಜಾ ವ್ಯವಹಾರ ಮಾಡಲು ಶ್ವಾನ ತರಬೇತಿ ಕೇಂದ್ರ ತೆರೆದಿದ್ದ ಆರೋಪಿಯೊಬ್ಬ, ಖಾಕಿ ಬಟ್ಟೆ ಧರಿಸುವ ಯಾವುದೇ ವ್ಯಕ್ತಿಯ ಮೇಲೆ ದಾಳಿ ಮಾಡುವಂತೆ ಶ್ವಾನಗಳಿಗೆ ತರಬೇತಿ ಕೊಟ್ಟಿದ್ದನು. ಇದೀಗ ಈ ವ್ಯಕ್ತಿಯನ್ನು ಬಂಧಿಸುವಲ್ಲಿ ಕೇರಳ ಪೊಲೀಸರು ಮುಂಚೂಣಿಯಲ್ಲಿದ್ದಾರೆ.

ಕೇರಳದ ಕೊಟ್ಟಾಯಂ ಜಿಲ್ಲೆಯ ನಾಯಿ ಸಾಕಣೆ ಕೇಂದ್ರದ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ನಡೆಸುತ್ತಿದ್ದ ಶ್ವಾನ ತರಬೇತಿ ಕೇಂದ್ರದಿಂದ 17 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರ ದಾಳಿಯ ವೇಳೆ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ರಾಬಿನ್ ಜಾರ್ಜ್ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ. ಪೊಲೀಸರು ತರಬೇತಿ ಪಡೆದಿದ್ದ ನಾಯಿಗಳ ಗುಂಪನ್ನು ಎದುರಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಅದೃಷ್ಟವಶಾತ್​ ಪೊಲೀಸ್ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೇಂದ್ರದಲ್ಲಿ ಪಿಟ್‌ಬುಲ್ಸ್ ಮತ್ತು ರೊಟ್‌ವೀಲರ್‌ಗಳು ಸೇರಿದಂತೆ ಸುಮಾರು 13 ನಾಯಿಗಳನ್ನು ಆರೋಪಿ ಸಾಕಿದ್ದ. ಇವುಗಳಿಗೆ ಖಾಕಿ ಬಣ್ಣದ ಬಟ್ಟೆ ಧರಿಸುವ ಯಾವುದೇ ವ್ಯಕ್ತಿಯನ್ನು ಕಂಡರೆ ಕಚ್ಚಲು ತರಬೇತಿ ಕೊಟ್ಟಿದ್ದಾನೆ ಎಂದು ಕೊಟ್ಟಾಯಂ ಪೊಲೀಸ್ ಸೂಪರಿಂಟೆಂಡೆಂಟ್ ಕೆ. ಕಾರ್ತಿಕ್ ತಿಳಿಸಿದರು. ಸದ್ಯ ಕೇರಳ ಪೊಲೀಸರು ಆರೋಪಿಯ ಹುಡುಕಾಟಕ್ಕಾಗಿ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ

Ads on article

Advertise in articles 1

advertising articles 2

Advertise under the article

ಸುರ