-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾವೇರಿ ಗಲಾಟೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸರಿಗೆ ನೀಡಿದ ಉಪಹಾರದಲ್ಲಿ ಸತ್ತ ಇಲಿ ಪತ್ತೆ

ಕಾವೇರಿ ಗಲಾಟೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸರಿಗೆ ನೀಡಿದ ಉಪಹಾರದಲ್ಲಿ ಸತ್ತ ಇಲಿ ಪತ್ತೆ


ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಸೆ.26ರಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಕರೆ ನೀಡಿರುವ ಬಂದ್‌ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಬಂದ್​​ ಕಾರ್ಯದಲ್ಲಿ ನಿರತರಾಗಿರುವ ಪೊಲೀಸರಿಗೆ ಅಸಮರ್ಪಕ ಆಹಾರವನ್ನು ಪೂರೈಕೆ ಮಾಡಿರುವುದು ಬಯಲಾಗಿದೆ. 

ಬೆಂಗಳೂರು ಬಂದ್‌ ಹಿನ್ನೆಲೆ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದ ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿಯೊಂದು ಪತ್ತೆಯಾಗಿದೆ. ಅವರಿಗೆ ಬೆಳಗ್ಗಿನ ಉಪಹಾರಕ್ಕೆ ರೈಸ್ ಬಾತ್ ನೀಡಲಾಗಿತ್ತು. ಈ ವೇಳೆ ಪೊಲೀಸ್ ಆ ಪೊಟ್ಟಣವನ್ನು ಓಪನ್ ಮಾಡಿದಾಗ ಸತ್ತ ಇಲಿಯನ್ನು ಕಂಡು ಗಾಬರಿಯಾಗಿದ್ದಾರೆ. ಪೊಲೀಸರಿಗೆ ‘ಇಲಿ’ ಇರುವ ಉಪಹಾರ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಯಶವಂತಪುರದಲ್ಲಿರುವ ಅಶೋಕ್ ಟಿಫಿನ್ ಸೆಂಟರ್‌ನಲ್ಲಿ ಒಟ್ಟು 180 ಜನಕ್ಕೆ ತಿಂಡಿಯನ್ನು ಸಿದ್ಧಪಡಿಸಿಲಾಗಿತ್ತು. ಬೆಳಗ್ಗೆ 7-30ಕ್ಕೆ ತಿಂಡಿಯನ್ನು ವಿತರಿಸಲಾಗಿದೆ. ಈ ವೇಳೆ ಸಿಬ್ಬಂದಿಯೊಬ್ಬರು ಪ್ಯಾಕೆಟ್‌ ತೆರೆದಾಗ ಇಲಿ ಪತ್ತೆಯಾಗಿದೆ. ಕೂಡಲೇ ತಮ್ಮ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ತಿಂಡಿ ತಿನ್ನದಂತೆ ಇತರೆ ಸಿಬ್ಬಂದಿಗೆ ತಿಳಿಸಿದ್ದಾರೆ. ಹೀಗಾಗಿ ಯಾವ ಸಿಬ್ಬಂದಿ ತಿಂಡಿ ಸೇವಿಸಿಲ್ಲ. ಇದರಿಂದ ಆಗಬಹುದಾದ ಅನುಹಾತವೊಂದು ತಪ್ಪಿದೆ ಎನ್ನಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ