-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಿನ್ನಿಗೋಳಿ: ನಾಗರಹಾವಿಗೆ ಡೀಸೆಲ್ ಎರಚಿ ನರಳುವಂತೆ ಮಾಡಿದ ಕಾವಲುಗಾರ - ಮೈಯುರಿಯಿಂದ ನರಳಿದ

ಕಿನ್ನಿಗೋಳಿ: ನಾಗರಹಾವಿಗೆ ಡೀಸೆಲ್ ಎರಚಿ ನರಳುವಂತೆ ಮಾಡಿದ ಕಾವಲುಗಾರ - ಮೈಯುರಿಯಿಂದ ನರಳಿದ


ಕಿನ್ನಿಗೋಳಿ: ಕೆಲದಿನಗಳ ಹಿಂದೆ ಕಿನ್ನಿಗೋಳಿಯಲ್ಲಿ ನಾಗರಹಾವೊಂದಕ್ಕೆ ಡಿಸೇಲ್ ಎರಚಿ ನರಳುವಂತೆ ಮಾಡಿದವನು ಇದೀಗ ಮೈಉರಿಯಿಂದ ನರಳಿ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ಕಳೆದ ವಾರ ನಾಗರಹಾವೊಂದು ಕಂಡು ಬಂದಿತ್ತು. ಇದನ್ನು ಕಂಡ ಕಟ್ಟಡದ ಕಾವಲುಗಾರ ಉತ್ತರ ಕರ್ನಾಟಕ ಮೂಲದ ವ್ಯಕ್ತಿಯೊಬ್ಬ ಆ ನಾಗರಹಾವಿಗೆ ಡಿಸೇಲ್ ಎರಚಿದ್ದಾನೆ. ಇದರಿಂದ ವಿಪರೀತ ಮೈ ಉರಿಯಿಂದಾಗಿ ನಾಗರಹಾವು ಒದ್ದಾಡಿದೆ. ತಕ್ಷಣ ಸ್ಥಳೀಯರು ಉರಗ ರಕ್ಷಕ ಯತೀಶ್ ಕಟೀಲು ತಿಳಿಸಿದ್ದಾರೆ. ಯತೀಶ್ ಅವರು ಸ್ಥಳಕ್ಕೆ ಧಾವಿಸಿ ಶ್ಯಾಂಪ್ ಮೂಲಕ ಹಾವನ್ನು ತೊಳೆದು, ಆರೈಕೆ ಮಾಡಿದ್ದಾರೆ. ಈ ವೇಳೆ ನಾಗರಹಾವು ಸಹಜ ಸ್ಥಿತಿಗೆ ಬಂದಿದೆ. ಬಳಿಕ ಅವರು ಕಾಡಿಗೆ ಬಿಟ್ಟಿದ್ದಾರೆ.






ಆದರೆ ಇದೀಗ ಒಂದು ವಾರ ಕಳೆಯುವಷ್ಟರಲ್ಲೇ ಡಿಸೇಲ್ ಎರಚಿದ ಕಾವಲುಗಾರನಿಗೂ ನಾಗರಹಾವಿನಂತೆ ಮೈ ಉರಿಯಲು ಆರಂಭಿಸಿದೆ. ಆತನನ್ನು ಸಂಬಂಧಿಕರು ಉತ್ತರ ಕರ್ನಾಟಕಕ್ಕೆ ಕರೆದುಕೊಂಡು ಹೋಗಿದ್ದು, ಇದೀಗ ಅಲ್ಲೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ ಎಂದು ಉರಗ ರಕ್ಷಕ ಯತೀಶ್ ಕಟೀಲು ತಿಳಿಸಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article