-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತಾಜ್ ಹೊಟೇಲ್ ಸ್ಪೋಟಿಸಲು ಇಬ್ಬರು ಪಾಕಿಸ್ತಾನಿಯರು ಬರುತ್ತಿದ್ದಾರೆ: ಅಲರ್ಟ್ ಆದ ಮುಂಬೈ ಪೊಲೀಸರು

ತಾಜ್ ಹೊಟೇಲ್ ಸ್ಪೋಟಿಸಲು ಇಬ್ಬರು ಪಾಕಿಸ್ತಾನಿಯರು ಬರುತ್ತಿದ್ದಾರೆ: ಅಲರ್ಟ್ ಆದ ಮುಂಬೈ ಪೊಲೀಸರು


ಮುಂಬೈ: ಇಲ್ಲಿನ ತಾಜ್​ ಹೋಟೆಲ್​ ಅನ್ನು ಸ್ಫೋಟಿಸಲು ಪಾಕಿಸ್ತಾನಿಗಳಿಬ್ಬರು ಮುಂಬೈ ನಗರವನ್ನು ತಲುಪಲಿದ್ದಾರೆ ಎಂದು ಮುಂಬೈ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ಗುರುವಾರ ನಡೆದಿದೆ.

ಮುಂಬೈ ಪೊಲೀಸ್​ ಇಲಾಖೆಯ​ ಮುಖ್ಯ ಕಂಟ್ರೋಲ್​ ರೂಮ್​ಗೆ ಈ ಬೆದರಿಕೆ ಕರೆ ಬಂದಿದೆ. ಮುಂಬೈಯ ಲ್ಯಾಂಡ್​ಮಾರ್ಕ್​ ಆಗಿರುವ ತಾಜ್​ ಹೋಟೆಲ್​ ಅನ್ನು ಸ್ಫೋಟ ಮಾಡಲು ಪಾಕಿಸ್ತಾನದ ಇಬ್ಬರು ವ್ಯಕ್ತಿಗಳು ಸಮುದ್ರ ಮಾರ್ಗದ ಮೂಲಕ ಭಾರತದ ಗಡಿಯನ್ನು ಪ್ರವೇಶ ಮಾಡಲಿದ್ದಾರೆ ಎಂದು ಬೆದರಿಕೆ ಹಾಕಲಾಗಿದೆ.

ಕರೆ ಮಾಡಿದವನು ತನ್ನನ್ನು ತಾನು ಮುಕೇಶ್​ ಸಿಂಗ್​ ಎಂದು ಪರಿಚಯಿಸಿಕೊಂಡಿದ್ದಾನೆ. ಆದರೆ ಆತನ ನಿಜವಾದ ಹೆಸರು ಜಗದಂಬ ಪ್ರಸಾದ್ ಸಿಂಗ್ ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. 35 ವರ್ಷ ಪ್ರಾಯದ ಪ್ರಸಾದ್​ ಸಿಂಗ್, ಉತ್ತರ ಪ್ರದೇಶದ ಗೊಂಡಾ ಮೂಲದವನು. ಸದ್ಯ ಮುಂಬೈನ ಸಾಂತಾಕ್ರೂಜ್​ನಲ್ಲಿ ನೆಲೆಸಿದ್ದಾನೆ‌. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ.

ಮುಂಬೈನ ಕೊಲಾಬಾ ಪ್ರದೇಶದಲ್ಲಿರುವ ತಾಜ್ ಹೋಟೆಲ್ ಮೇಲೆ 2008ರಲ್ಲಿ ಉಗ್ರರಿಂದ ದಾಳಿ ನಡೆದಿತ್ತು. ಈ ಘಟನೆಯಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಮಂದಿ ಮೃತಪಟ್ಟಿದ್ದರು. ಒಂಬತ್ತು ಉಗ್ರರನ್ನು ನಮ್ಮ ಯೋಧರು ಹೊಡೆದುರುಳಿಸಿದ್ದರು. ಕೊನೆಗೂ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಅಜ್ಮಲ್ ಕಸಬ್​ನನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಸೇನೆ ಯಶಸ್ವಿಯಾಗಿತ್ತು. 2012ರ ನವೆಂಬರ್ 21ರಂದು ಈತನಿಗೆ ಗಲ್ಲುಶಿಕ್ಷೆ ವಿಧಿಸಲಾಯಿತು.


Ads on article

Advertise in articles 1

advertising articles 2

Advertise under the article

ಸುರ