ಸುರತ್ಕಲ್: ಚಿತ್ರಾಪುರ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆ ಬಂದಿದ್ದ 15 ವರ್ಷದ ವಿದ್ಯಾರ್ಥಿನಿ ಅಲೆಗಳ ಸೆಳೆತಕ್ಕೆ ಸಿಲುಕಿ ಮೃತ್ಯು


ಸುರತ್ಕಲ್: ದಸರಾ ರಜೆ ಹಿನ್ನೆಲೆ ಸಮುದ್ರ ವಿಹಾರಕ್ಕೆ ಬಂದಿದ್ದ ವಿದ್ಯಾರ್ಥಿಗಳ ತಂಡ ನೀರಿಗಿಳಿದ ವೇಳೆ ವಿಟ್ಲ ಮೂಲದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ

ನೇಪಾಳ ಮೂಲದ, ಸದ್ಯ ವಿಟ್ಲ ನಿವಾಸಿ ನಿಶಾ (15) ಮೃತಪಟ್ಟ ವಿದ್ಯಾರ್ಥಿನಿ. 

ವಿಟ್ಲ ಮೂಲದ ದಿಗಂತ್ (15), ದಿವ್ಯರಾಜ್ (15), ತೇಜಸ್ (14), ಕೀರ್ತನ್ (16), ಅಶ್ಮಿತಾ (15), ನಿಶಾ (15) ಎಂಬ ವಿದ್ಯಾರ್ಥಿ - ವಿದ್ಯಾರ್ಥಿನಿಯರ ತಂಡ ಕುಳಾಯಿ ಚಿತ್ರಾಪುರ ಬೀಚ್ ಗೆ ಸಮುದ್ರ ವಿಹಾರಕ್ಕೆ ಬಂದಿದ್ದರು.‌ ಈ ವೇಳೆ ಎಲ್ಲರೂ ನೀರಾಟ ಆಡಲು ಸಮುದ್ರಕ್ಕೆ ಇಳಿದಿದ್ದಾರೆ. ಈ ವೇಳೆ ಸಮುದ್ರದ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ನಾಲ್ಕು ಮಂದಿ ವಿದ್ಯಾರ್ಥಿಗಳು ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ ನಿಶಾ ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu