-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಅತಿವೇಗದ ಚಾಲನೆಯಲ್ಲಿ ಹೊಂಡಕ್ಕಿಳಿದ ಕಾರು ಹೊಂಡಕ್ಕೆ - ಚಾಲಕನಿಗೆ 3,000 ರೂ. ದಂಡ

ಮಂಗಳೂರು: ಅತಿವೇಗದ ಚಾಲನೆಯಲ್ಲಿ ಹೊಂಡಕ್ಕಿಳಿದ ಕಾರು ಹೊಂಡಕ್ಕೆ - ಚಾಲಕನಿಗೆ 3,000 ರೂ. ದಂಡ


ಮಂಗಳೂರು: ಅತಿವೇಗದಲ್ಲಿ ಚಲಾಯಿಸಿಕೊಂಡು ಬಂದಿರುವ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಹೊಂಡಕ್ಕಿಳಿದ ಘಟನೆ ನಗರದ ಹೊರವಲಯದ ಗುರುಪುರದ ಬಳಿ ನಡೆದಿದೆ.





ಬಂಟ್ವಾಳ ಕೈಕಂಬ ಜೋಡುಮಾರ್ಗ ನಿವಾಸಿ ಪಿ‌.ಎಸ್.ಮೊಹಮ್ಮದ್ ಅತಿವೇಗದಿಂದ ಕಾರು ಚಲಾಯಿಸಿಕೊಂಡು ಬರುತ್ತಿದ್ದರು‌. ಅವರು ಗುರುಪುರ ತಲುಪುತ್ತಿದ್ದಂತೆ ಕಾರು ರಸ್ತೆ ತೊರೆದು ಅತಿ ವೇಗದಿಂದ ರಸ್ತೆ ಬದಿಯ ಹೊಂಡಕ್ಕಿಳಿದಿದೆ. ಆದರೆ ಕಾರಿನಲ್ಲಿದ್ದವರಿಗೆ ಏನೂ ಗಾಯವಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.


ಎದೆ ಝಲ್ಲೆನಿಸುವ ಈ ಸಂಪೂರ್ಣ ಘಟನೆಯು 8ಸೆಕೆಂಡ್ ನ ವೀಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ಅಕ್ಟೋಬರ್ 15ರಂದು ನಡೆದಿದ್ದು, ಇಂದು ವೀಡಿಯೋ ವೈರಲ್ ಆಗಿದೆ. ಇದೀಗ ಈ ಬಗ್ಗೆ ಪ್ರಕರಣ ದಾಖಲಿಸಿರುವ ಬಜ್ಪೆ ಠಾಣಾ ಪೊಲೀಸರು ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಪ್ರಕರಣ ದಾಖಲಿಸಿ ವಾಹನ ಚಾಲಕನಿಗೆ 3 ಸಾವಿರ ರೂ. ದಂಡ ವಿಧಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ