-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ನೇತ್ರಾವತಿ ಸೇತುವೆಯಲ್ಲಿ ಐದಾರು ವಾಹನಗಳ ನಡುವೆ ಸರಣಿ ಅಪಘಾತ - ಸಂಚಾರ ವ್ಯತ್ಯಯ

ಮಂಗಳೂರು: ನೇತ್ರಾವತಿ ಸೇತುವೆಯಲ್ಲಿ ಐದಾರು ವಾಹನಗಳ ನಡುವೆ ಸರಣಿ ಅಪಘಾತ - ಸಂಚಾರ ವ್ಯತ್ಯಯ


ಉಳ್ಳಾಲ: ಸಂಜೆ ವೇಳೆ ಜಿಟಿಜಿಟಿ ಸುರಿಯುತ್ತಿರುವ ಮಳೆಗೆ ನಗರದ ನೇತ್ರಾವತಿ ಸೇತುವೆಯಲ್ಲಿ ಲಾರಿ, ಮೂರು ಕಾರುಗಳು, ಪಿಕ್ ಅಪ್ ಹಾಗೂ ಸಿಟಿ ಬಸ್ ನಡುವೆ ಸರಣಿ ಅಪಘಾತ ನಡೆದಿದೆ. ಪರಿಣಾಮ ಸಂಚಾರದಲ್ಲಿ ವ್ಯತ್ಯಯವಾಗಿ ರಸ್ತೆಯುದ್ದಕ್ಕೂ ವಾಹನಗಳು ಸರತಿ ಸಾಲಿನಲ್ಲಿ‌ ನಿಂತಿರುವುದು ಕಂಡು ಬಂದಿದೆ.

ಮಳೆಗೆ ನೇತ್ರಾವತಿ ಸೇತುವೆಯಲ್ಲಿ ನಿಂತಿದ್ದ ಲಾರಿಗೆ ಹಿಂಭಾಗದಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಆದರೆ ಕ್ಷಣ ಮಾತ್ರದಲ್ಲಿ ಅದರ ಹಿಂದಿನ ಮೂರು ಕಾರು, ಪಿಕ್ ಅಪ್ ವಾಹನ, ಸಿಟಿ ಬಸ್ಸುಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಿಂದ ವಾಹನ ಸವಾರರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸರಣಿ ಅಪಘಾತದಿಂದ ಹೆದ್ದಾರಿ ಉದ್ದಕ್ಕೂ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಹೆಚ್ಚಿನ ಪೊಲೀಸರು ಮೈಸೂರು ದಸರಾ ಬಂದೋಬಸ್ತಿಗೆ ತೆರಳಿದ್ದಾರೆ. ಪರಿಣಾಮ ಟ್ರಾಫಿಕ್‌ ಸಮಸ್ಯೆಗೀಡಾದ ವಾಹನ ಸವಾರರು ಕಿರಿ ಕಿರಿ ಅನುಭವಿಸಿದ್ದಾರೆ. 

 

Ads on article

Advertise in articles 1

advertising articles 2

Advertise under the article