-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅಧಿಕಾರ ದುರ್ಬಳಕೆ ಮಾಡಿರುವ ಆರೋಪ ಕೊಪ್ಪಳ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಸೇವೆಯಿಂದ ವಜಾ

ಅಧಿಕಾರ ದುರ್ಬಳಕೆ ಮಾಡಿರುವ ಆರೋಪ ಕೊಪ್ಪಳ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಸೇವೆಯಿಂದ ವಜಾ


ಕೊಪ್ಪಳ: ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯ ಸೇವೆಯಿಂದಲೇ ವಜಾಗೊಂಡಿದ್ದಾನೆ.

ಕೆ.ಎಂ.ಸಿದ್ದೇಶ್ವರ ವಜಾಗೊಂಡ ಅಗ್ನಿಶಾಮಕದಳದ ಅಧಿಕಾರಿ. ಈತನ ಮೇಲೆ ನಕಲಿ ದಾಖಲೆಯನ್ನು ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುವ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಿ ರಾಜ್ಯ ಅಗ್ನಿಶಾಮಕದಳದ ಡಿಜಿಯಿಂದ ಆದೇಶ ಹೊರಡಿಸಲಾಗಿದೆ.

ಅಧಿಕಾರ ವ್ಯಾಪ್ತಿಯನ್ನು ಮೀರಿ ಫೈರ್ ನೀರಪೇಕ್ಷಣಾ ಪತ್ರ ನೀಡುವುದು, ನೂತನ ಕಟ್ಟಡಗಳು ಹಾಗೂ ಆಸ್ಪತ್ರೆಗಳಿಗೆ ಎನ್​ಒಸಿ ನೀಡುವುದು, ಸಾರ್ವಜನಿಕರಿಂದ ಅತಿಯಾದ ಲಂಚಕ್ಕೆ ಬೇಡಿಕೆ ಇಡುವುದು, ನೀರಪೇಕ್ಷಣಾ ಪ್ರಮಾಣ ಪತ್ರ ನೀಡಿ ಸರ್ಕಾರದ ಬೊಕ್ಕಸಕ್ಕೆ ಹಣ ಜಮಾ ಮಾಡದೆ ನಷ್ಟ ಉಂಟು ಮಾಡಿರುವ ಆರೋಪ ಕೆ.ಎಂ. ಸಿದ್ದೇಶ್ವರನ ಮೇಲಿದೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಗಳು ಸಾಬೀತಾದ ಹಿನ್ನಲೆಯಲ್ಲಿ ಅಧಿಕಾರಿ ಕೆ.ಎಂ. ಸಿದ್ದೇಶ್ವರನನ್ನು ಸೇವೆಯಿಂದಲೇ ವಜಾ ಮಾಡಿ ಇಲಾಖೆ ಆದೇಶಿಸಿದೆ.


Ads on article

Advertise in articles 1

advertising articles 2

Advertise under the article