-->
ಮಂಗಳೂರು: ಕರ್ತವ್ಯದಲ್ಲಿದ್ದಾಗಲೇ ಹೆಡ್ ಕಾನ್ ಸ್ಟೇಬಲ್ ಹೃದಯಾಘಾತಕ್ಕೆ ಬಲಿ

ಮಂಗಳೂರು: ಕರ್ತವ್ಯದಲ್ಲಿದ್ದಾಗಲೇ ಹೆಡ್ ಕಾನ್ ಸ್ಟೇಬಲ್ ಹೃದಯಾಘಾತಕ್ಕೆ ಬಲಿ

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹೆಡ್ ಕಾನ್ ಸ್ಟೇಬಲ್ ಒಬ್ಬರು ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

2016ರ ಬ್ಯಾಚ್‌ನ ಸೋಮನಗೌಡ ಚೌಧರಿ (32) ಮಂಗಳೂರು ಸಿಎಆ‌ರ್ ಕಾನ್‌ಸ್ಟೇಬಲ್ ಆಗಿ ಕೆಲಸಕ್ಕೆ ನೇಮಕಾತಿಗೊಂಡಿದ್ದರು. ಬಳಿಕ ಹೆಡ್‌ಕಾನ್‌ಸ್ಟೇಬಲ್ ಆಗಿ ಭಡ್ತಿ ಪಡೆದ ಅವರು ಸದ್ಯ ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್‌ಸ್ಪೆಕ್ಟರ್‌ರ ವಾಹನ ಚಾಲಕನಾಗಿ ಕರ್ತವ್ಯದಲ್ಲಿದ್ದರು. ಮೂರು ವರ್ಷಗಳ ಹಿಂದೆ ಅವರಿಗೆ ವಿವಾಹವಾಗಿತ್ತು ಎಂದು ತಿಳಿದು ಬಂದಿದೆ.

ಮಂಗಳವಾರ ಕರ್ತವ್ಯದಲ್ಲಿದ್ದ ಅವರು ನಗರದ ಮಳಿಗೆಯೊಂದಕ್ಕೆ ತೆರಳಿದ್ದರು. ಈ ವೇಳೆ ಹಠಾತ್ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆಂದು ತಪಾಸಣೆ ನಡೆಸಿದ ವೈದ್ಯರು ತಿಳಿಸಿದ್ದಾರೆಂದು ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್, ಪೊಲೀಸ್ ಅಧಿಕಾರಿಗಳು, ಸಹೋದ್ಯೋಗಿ ಸಿಬ್ಬಂದಿ ವರ್ಗವು ಸೋಮನಗೌಡ ಅವರ ಮೃತದೇಹಕ್ಕೆ ಅಂತಿಮ ಗೌರವ ಸಲ್ಲಿಸಿ, ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಬಳಿಕ ಅವರ ತವರು ಜಿಲ್ಲೆ ವಿಜಯಪುರಕ್ಕೆ ಮೃತದೇಹವನ್ನು ಕಳುಹಿಸಿಕೊಡಲಾಯಿತು.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article