-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳಾದೇವಿ ನವರಾತ್ರಿ ಉತ್ಸವ- ಉಳಿಕೆ ಸ್ಟಾಲ್ ಗಳಿಗೆ ನಾಳೆ ಬೆಳಿಗ್ಗೆಯೇ ಬಹಿರಂಗ ಹರಾಜು ಮಾಡಲು ಜಿಲ್ಲಾಡಳಿತ ಸೂಚನೆ

ಮಂಗಳಾದೇವಿ ನವರಾತ್ರಿ ಉತ್ಸವ- ಉಳಿಕೆ ಸ್ಟಾಲ್ ಗಳಿಗೆ ನಾಳೆ ಬೆಳಿಗ್ಗೆಯೇ ಬಹಿರಂಗ ಹರಾಜು ಮಾಡಲು ಜಿಲ್ಲಾಡಳಿತ ಸೂಚನೆ


ಮಂಗಳೂರು: ಮಂಗಳಾದೇವಿ  ನವರಾತ್ರಿ ಉತ್ಸವದಲ್ಲಿ  ಮುಸ್ಲಿಂ  ವ್ಯಾಪಾರಿಗಳಿಗೆ ಅನ್ಯಾಯ ಆಗಿರುವ ವಿಚಾರದಲ್ಲಿ ಮಧ್ಯಪ್ರವೇಶಿಸಿರುವ ಜಿಲ್ಲಾಡಳಿತ ಏಲಂ ಆಗದೆ ಉಳಿಕೆಯಾಗಿರುವ  ಮಳಿಗೆಗಳಿಗೆ ನಾಳೆ ಬೆಳಿಗ್ಗೆಯೆ ಬಹಿರಂಗ ಹರಾಜು ಮಾಡುವಂತೆ ದೇವಸ್ಥಾನಕ್ಕೆ ಸೂಚಿಸಿದೆ.

ಬೀದಿಬದಿ ಮತ್ತು ಜಾತ್ರೆ ವ್ಯಾಪಾರಸ್ಥರ ಸಂಘದ ಪ್ರಮುಖರು ಇಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಬಳಿಕ ದಕ್ಷಿಣ ಕನ್ನಡ ಜಿಲ್ಲಾ  ಅಪರ ಜಿಲ್ಲಾಧಿಕಾರಿ ಜಿ.ಸಂತೋಷ್ ಕುಮಾರ್ ಅವರಿಗೆ ಈ ಬಗ್ಗೆ  ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯನ್ನು ಕರೆಸಿದ ಅಪರ ಜಿಲ್ಲಾಧಿಕಾರಿಗಳು ಏಲಂ ಆಗದೆ ಉಳಿದಿರುವ ಮಳಿಗೆಗಳಿಗೆ ನಾಳೆ ಬೆಳಿಗ್ಗೆಯೆ ಬಹಿರಂಗ ಹರಾಜು ಮಾಡಿ ನೀಡುವಂತೆ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ  ಮಹಾನಗರ ಪಾಲಿಕೆ ಉಪ ಆಯುಕ್ತರಾದ (ಕಂದಾಯ) ರೇಖಾ ಶೆಟ್ಟಿ , ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್, ಮಂಗಳಾದೇವಿ ದೇವಸ್ಥಾನದ ಪ್ರತಿನಿಧಿಗಳು, ಬೀದಿಬದಿ ಮತ್ತು ಜಾತ್ರೆ ವ್ಯಾಪಾರಸ್ಥರ ಸಂಘದ ಪ್ರಮುಖರಾದ ಬಿ.ಕೆ ಇಮ್ತಿಯಾಝ್, ಸುನಿಲ್ ಕುಮಾರ್ ಬಜಾಲ್, ಹರೀಶ್ ಪೂಜಾರಿ, ಪ್ರವೀಣ್ ಕುಮಾರ್ ಕದ್ರಿ, ರಿಯಾಜ್, ಶಾಫಿ ಬೆಂಗ್ರೆ, ಆಸೀಫ್ ಬಾವ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article