-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ರೇಯಸಿಗೆ ಚೂರಿಯಿಂದ ಇರಿದು ಪರಾರಿಯಾಗಲು ಯತ್ನಿಸಿದ ಪಾಗಲ್ ಪ್ರೇಮಿ - ಆರೋಪಿಯನ್ನು ಹಿಡಿದ ಕ್ಯಾಬ್ ಚಾಲಕ

ಪ್ರೇಯಸಿಗೆ ಚೂರಿಯಿಂದ ಇರಿದು ಪರಾರಿಯಾಗಲು ಯತ್ನಿಸಿದ ಪಾಗಲ್ ಪ್ರೇಮಿ - ಆರೋಪಿಯನ್ನು ಹಿಡಿದ ಕ್ಯಾಬ್ ಚಾಲಕ


ನವದೆಹಲಿ: ತನ್ನನ್ನು ನಿರ್ಲಕ್ಷ್ಯ​ ಮಾಡುತ್ತಿದ್ದಾಳೆಂದು ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಗೆ ಮಾರಕಾಯುಧದಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನವದೆಹಲಿಯ ಲಾಡೋ ಸರಾಯ್ ಪ್ರದೇಶದಲ್ಲಿ ನಡೆದಿದೆ.

ಇರಿತಕ್ಕೊಳಗಾದ 23 ವರ್ಷದ ಯುವತಿಯ ಸ್ಥಿತಿ ಗಂಭಿರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಗೌರವ್​ ಪಾಲ್ (27) ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

ಬಂಧಿತ ಆರೋಪಿ ಗೌರವ್ ತನ್ನ ಪ್ರೇಯಸಿ ತನ್ನನ್ನು ನಿರ್ಲಕ್ಷಿಸು​ತ್ತಿದ್ದಾಳೆ ಎಂಬ ಕಾರಣಕ್ಕೆ ಆಕೆಯನ್ನು ಹೆದರಿಸಲು ಹೋಗಿ ಕೃತ್ಯ ಎಸಗಿದ್ದಾನೆ. ಮೊದಲಿಗೆ ಆಕೆಯನ್ನು ಭೇಟಿ ಮಾಡುವ ನೆಪದಲ್ಲಿ ಕರೆಸಿಕೊಂಡ ಆರೋಪಿ ಗೌರವ್ ಪಾಲ್ ಬಳಿಕ ಕ್ಯಾಬ್​ ಒಂದನ್ನು ಬುಕ್​ ಮಾಡಿ ಬೇರೆಡೆಗೆ ತೆರಳೋಣ ಎಂದು ಹೇಳಿದ್ದಾನೆ.

ಕಾರಿನಲ್ಲಿ ಕುಳಿತುಕೊಂಡ ಬಳಿಕ ಆರೋಪಿ ಯುವತಿಗೆ ಚಾಕುವಿನಿಂದ ಇರಿಯಲು ಆರಂಭಿಸಿದ್ದಾನೆ‌. ಬಳಿಕ ಆಕೆಯನ್ನು ಗಾಯಗೊಳಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಇದನ್ನು ಗಮನಿಸಿದ ಕ್ಯಾಬ್​ ಚಾಲಕ ಆತನನ್ನು ಸಾರ್ವಜನಿಕರ ಸಹಾಯದೊಂದಿಗೆ ಹಿಡಿದು ಪೊಲೀಸರಿಗೊಪ್ಪಿಸಿದ್ದಾನೆ. ಅಕ್ಟೋಬರ್​ 10ರಂದು ಗಾಯಾಳು ಯುವತಿಯು ಬಂಧಿತ ಆರೋಪಿ ಗೌರವ್ ಪಾಲ್​ ತನಗೆ ಹಣಕಾಸಿನ ವಿಚಾರವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಕಂಟ್ರೋಲ್​ ರೂಮಿಗೆ ಕರೆ ಮಾಡಿ ದೂರು ದಾಖಲಿಸಿದ್ದಳು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 307ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Ads on article

Advertise in articles 1

advertising articles 2

Advertise under the article

ಸುರ