-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪತ್ನಿಯನ್ನೇ ಕೊಡಲಿಯಿಂದ ಕಡಿದು ಹತ್ಯೆಗೈದ ಪತಿ

ಪತ್ನಿಯನ್ನೇ ಕೊಡಲಿಯಿಂದ ಕಡಿದು ಹತ್ಯೆಗೈದ ಪತಿ

ಚಿಕ್ಕಮಗಳೂರು: ಕೈಹಿಡಿದ ಪತ್ನಿಯನ್ನು ಪತಿಯೇ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದಲ್ಲಿ ನಡೆದಿದೆ.

ಕಿರುಗುಂದ ಗ್ರಾಮದ ಪರಿಶಿಷ್ಟರ ಬಡಾವಣೆ ನಿವಾಸಿ ಪದ್ಮಾಕ್ಷಿ (40) ಕೊಲೆಗೀಡಾದ ಮಹಿಳೆ. ಪತಿ ಚಂದ್ರು ಪತ್ನಿಯನ್ನು ಹತ್ಯೆ ಮಾಡಿದ ಆರೋಪಿ.

ಗುರುವಾರ ರಾತ್ರಿ ಚಂದ್ರು ಕುಡಿದು ಮನೆಗೆ ಬಂದಿದ್ದು, ಕುಡಿತದ ವಿಚಾರಕ್ಕೆ ಪತಿ, ಪತ್ನಿ ನಡುವೆ ಗಲಾಟೆ ನಡೆದಿದೆ. ಇಬ್ಬರ ನಡುವಿನ ಜಗಳ ತಾರಕಕ್ಕೇರಿದ್ದ ವೇಳೆ ಕುಪಿತನಾದ ಪತಿ ಚಂದ್ರು ಕೊಡಲಿಯಿಂದ ಪತ್ನಿ ಪದ್ಮಾಕ್ಷಿ ಮೇಲೆ ಹಲ್ಲೆ ಮಾಡಿದ್ದಾನೆ. ಈ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪದ್ಮಾಕ್ಷಿ ಮನೆಯಂಗಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪತ್ನಿ ಮೃತಪಟ್ಟಿರುವುದು ಗೊತ್ತಾಗದೇ ಪತಿ ಚಂದ್ರು ಮನೆಯೊಳಗೆ ಮಲಗಿದ್ದು, ಬೆಳಗ್ಗೆ ವಿಚಾರ ಗೊತ್ತಾಗಿದೆ ಎಂದು ಹೇಳಲಾಗಿದೆ. ಗೋಣಿಬೀಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿ ಚಂದ್ರುನನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article

ಸುರ